Pages

Showing posts with label ದಲಿತ. Show all posts
Showing posts with label ದಲಿತ. Show all posts

Wednesday, 18 May 2011

ನನ್ನೂರ ದಲಿತರು ಕ್ಷೌರ ಕಲಿತದ್ದು

ನಾವು ಯಾರಿಗಿಂಥ ಕಮ್ಮಿ ಇಲ್ಲ 

ಕರ್ನಾಟಕದ ರಾಜ್ಯದ ಕಲ್ಪತರು ನಾಡೆಂದೇ ಪ್ರಸಿದ್ಧವಾದ ಊರು ತಿಪಟೂರು.  ಸಾಮಾಜಿಕವಾಗಿ, ಆರ್ಥಿಕವಾಗಿ, ಸಾಹಿತ್ಯಕವಾಗಿ ಬೆಳೆದಿರುವ ನಮ್ಮ ಈ ಊರು ವಾಣಿಜ್ಯವಾಗಿ ಹೆಸರು ಮಾಡಿದಂತೆಯೇ ಕಲೆ ಮತ್ತು ನಾಟಕರಂಗ ಕ್ಷೇತ್ರದಲ್ಲೂ ಖ್ಯಾತಿಗಳಿಸಿದೆ.


ನಮ್ಮ ತಾಲೂಕಿನಲ್ಲಿ ವೀರಶೈವ ಸಮೂದಾಯದವರೇ ಹೆಚ್ಚು ಸಂಖ್ಯೆಯಲ್ಲಿದ್ದು ಪಂಚ ಮಠಗಳ ಸಾಮಿಪ್ಯದಿಂದ ಒಂದು ರೀತಿಯ ಧಾರ್ಮಿಕ ಕ್ಷೇತ್ರ ಎನಿಸಿದೆ. ಹಲವು  ವೈಶಿಷ್ಟ್ಯವಿರುವ ತಮ್ಮ ಊರು ಶೈಕ್ಷಣಿಕವಾಗಿಯೂ ಸಾಕಷ್ಟು ಪ್ರಗತಿ ಸಾಧಿಸಿದೆ.    ಇಂತಹ ನಮ್ಮ ತಾಲೂಕಿನ ಬಿಸಿಲೇಹಳ್ಳಿ ಗ್ರಾಮದ ದಲಿತರು ಒಂದು ಇತಿಹಾಸ ಸೃಷ್ಟಿಸಿ, ಗಮನ ಸೆಳೆದಿದ್ದಾರೆ. ತಮ್ಮ ನಡೆ ನುಡಿ ಸಾಧನೆಗಳಿಂದ ಅಚ್ಚರಿ ಮೂಡಿಸಿರುವ ಇವರು ಸಮಾಜದ ಜನ ನಿಬ್ಬೆರಗಾಗಿ ನೋಡುವಂತಹ ಅವಕಾಶವನ್ನು ಸೃಷ್ಟಿಸಿಕೊಂಡಿದ್ದಾರೆ.

 ಡಾ. ಬಿ.ಆರ್.ಅಂಬೇಡ್ಕರ್ ಅವರ ಆದರ್ಶಗಳನ್ನು ಕಾಯಾ, ವಾಚಾ, ಮನಸಾ ಚಾಚೂ ತಪ್ಪದೇ ಪಾಲಿಸುವ ಇವರು ಇಡೀ ದಲಿತ ಸಮೂದಾಯಕ್ಕೆ ಮಾದರಿಯಾಗಿದ್ದಾರೆ. ಸರಕಾರ ನೀಡುವ ಎಲ್ಲಾ ಅವಕಾಶಗಳನ್ನು ಸದುಪಯೋಗ ಮಾಡಿಕೊಂಡ ಈ ದಲಿತ ಕಾಲೋನಿಯಲ್ಲಿ ಎಲ್ಲರೂ ವಿದ್ಯಾವಂತರೇ. ಕನಿಷ್ಟ ಹತ್ತನೇ ತರಗತಿಯಿಂದ ಪದವಿವರೆಗೂ ಓದಿಕೊಂಡಿದ್ದಾರೆ.  ಹಾಗಾಗಿ ಇದು ಸಂಪೂರ್ಣ ಸಾಕ್ಷರಗ್ರಾಮ ಎನಿಸಿದೆ.
 ಮತ್ತೊಂದು ಅಚ್ಚರಿ ಎಂದರೆ, ಇಲ್ಲಿನ ಪ್ರತಿ ಮನೆಯಲ್ಲೂ ಒಬ್ಬರಲ್ಲ ಒಬ್ಬರು ಸರಕಾರಿ ಸೇವೆಯಲ್ಲಿದ್ದಾರೆ.    ಗುಮಾಸ್ತನಿಂದ ಹಿಡಿದು, ಶಿಕ್ಷಕ, ಬಸ್ ಚಾಲಕ, ಬಸ್ ಕಂಡಕ್ಟರ್, ಮೆಕ್ಯಾನಿಕ್, ಕಂದಾಯ ಇಲಾಖೆ, ಅರಣ್ಯ, ತೆರಿಗೆ ಇಲಾಖೆಯ ಅಧಿಕಾರಿ, ತಹಸೀಲ್ದಾರ್, ಶಿಕ್ಷಣ ಇಲಾಖೆಯ ಉಪನಿರ್ದೇಶಕ ಹೀಗೇ ಜಿಲ್ಲಾ ಮಟ್ಟದ ಅಧಿಕಾರಿಗಳವರೆಗೆ ಪಟ್ಟಿ ಬೆಳೆಯುತ್ತಾ ಹೋಗುತ್ತದೆ. 
ಈ ಊರಿನ ದಲಿತರ ಮತ್ತೊಂದು ವಿಶೇಷ ಏನೆಂದರೆ ಇಲ್ಲಿ ಇದೂವರೆಗೂ ಮೇಲ್ಜಾತಿಯವರ ಜೊತೆ ಕಲಹ ಮಾಡಿಕೊಳ್ಳದೇ ಶಾಂತಿ ಸೌಹಾರ್ಧತೆಯಿಂದ ಬಾಳುತ್ತಿರುವುದು. ವೀರಶೈವರು ಬಿಟ್ಟರೆ ಇಲ್ಲಿ ವಾಸಿಸುವುದು ದಲಿತರೇ, ಬೇರೆ ಯಾವುದೇ ಜನ ಇಲ್ಲಿ ಇಲ್ಲ. ಊರಿನ ವೀರಶೈವ ದೇವರಿಗೆ ಎಲ್ಲರೂ ಸೇರಿ ನಮಿಸಿ, ಪೂಜಿಸುತ್ತಾರೆ. ಒಂದೇ ಕುಟುಂಬದವರಂತೆ ಜಾತ್ರೆ ಉತ್ಸವಗಳಲ್ಲಿ ಒಟ್ಟಾಗಿ ಭಾಗವಹಿಸಿ, ಸಂಭ್ರಮಿಸುತ್ತಾರೆ. ಸಂಪ್ರದಾಯ ಮತ್ತು ಮಡಿವಂತಿಕೆಗೆ ಇಲ್ಲಿ ದಲಿತರು ಎಂದೂ ಭಿನ್ನ ಮಾಡಿಲ್ಲದಿರುವುದರಿಂದ ಮೇಲ್ಜಾತಿಯವರೂ ಸಹ ಇಲ್ಲಿನ ದಲಿತರೊಂದಿಗೆ ಉತ್ತಮ ಭಾಂಧವ್ಯ ಹೊಂದಿದ್ದಾರೆ.
ಇವರ ಮತ್ತೊಂದು ಗಮನ ಸೆಳೆಯುವ ವಿಶೇಷ ಎಂದರೆ, ಕ್ಷೌರಿಕರ ಸಹಾಯವಿಲ್ಲದೇ ಅವರ ತಲೆ ಕೂದಲುಗಳನ್ನು ಅವರೇ ಕತ್ತರಿಸಿಕೊಳ್ಳುವುದು. ತಮ್ಮ ತಮ್ಮ ತಲೆ ಕೂದಲುಗಳನ್ನು ತಾವೇ ಅಂದವಾಗಿ ಕತ್ತರಿಸಿಕೊಂಡು ಆಕರ್ಷಕವಾಗಿ ಕಾಣುವ ಮೂಲಕ ಸಮೂದಾಯದ ಸ್ವಾಭಿಮಾನ ಮೆರೆದಿರುವುದಲ್ಲದೇ, ಪ್ರಜ್ಞಾವಂತ ಸಮಾಜಕ್ಕೆ ಸ್ವಾವಲಂಬನೆಯ ಪಾಠ ಹೇಳುತ್ತಾರೆ.
ಹೌದು, ಗಾಂಧಿಜಿ ಕೂಡ ದಕ್ಷಿಣ ಆಫ್ರಿಕಾದಲ್ಲಿ ವ್ಯಾಸಂಗ ಮಾಡುವಾಗ ತಾವೇ ಹೇರ್ ಕಟ್ ಮಾಡಿಕೊಳ್ಳುತ್ತಿದ್ದರು ಎಂಬುದನ್ನು ನಾವು ಓದಿದ್ದೇವೆ. ಆದರೆ ಇಲ್ಲಿನ ಯುವಕರೂ ಆಧುನಿಕ ಆಡಂಬರ, ದುಭಾರಿ ವೆಚ್ಚಕ್ಕೆ ಬಲಿಯಾಗದೇ ನಿಷ್ಠೆಯಿಂದ ಸಮಾಜದ ಬದ್ಧತೆಗೆ ಶರಣಾಗಿ ತಮ್ಮ ಕ್ಷೌರವನ್ನು ಮತ್ತು ಕೂದಲಿನ ಕಟಿಂಗ್‌ನ್ನು ತಾವೇ ಮಾಡಿಕೊಳ್ಳುವ ಮೂಲಕ ತಮ್ಮ ವಿಶಿಷ್ಟ ವ್ಯಕ್ತಿತ್ವವನ್ನು  ಅಭಿವ್ಯಕ್ತಗೊಳಿಸಿದ್ದಾರೆ.

ಬಹಳ ಹಿಂದೆ ಗ್ರಾಮದಲ್ಲಿ ದಲಿತರಿಗೆ ಕ್ಷೌರ ಮಾಡುವುದಿಲ್ಲ ಎಂದು ಕ್ಷೌರಿಕನೊಬ್ಬ ತಿರಸ್ಕರಿಸಿದ್ದ ಎಂಬ ಕಾರಣಕ್ಕೆ ಬೇಸತ್ತಿದ್ದ ಗ್ರಾಮಸ್ಥರು  ಅಂದಿನಿಂದಲೇ ಸ್ವತಃ ತಾವೇ ತಮ್ಮ ತಮ್ಮ ಕೂದಲುಗಳನ್ನು ಕತ್ತರಿಸಿಕೊಂಡು, ಮುಖ ಕ್ಷೌರ ಮಾಡಿಕೊಳ್ಳುತ್ತಿದ್ದರಂತೆ. ಅದು ಹಾಗೆಯೇ ರೂಡಿಯಾಗಿ ಎಲ್ಲರೂ ಹೇರ್ ಕಟ್ಟಿಂಗ್ ಮಾಡಿ ಕೊಳ್ಳುತ್ತಾರೆ. ತಲೆ ಕೂದಲು ಕತ್ತರಿಸುವುದು, ವಿನ್ಯಾಸಗೊಳಿಸುವುದು ನಮ್ಮ ಕೆಲಸವಲ್ಲ ಎಂದು ಇವರು ಯಾವತ್ತೂ ಮೂಗು ಮುರಿದವರಲ್ಲ. ಹಲವು ದಶಕಗಳಿಂದ ಗ್ರಾಮದಲ್ಲಿ ಯಾವ ಕ್ಷೌರಿಕನೂ ಇಲ್ಲ, ಗ್ರಾಮದ ದಲಿತರ‍್ಯಾರೂ ಕೂದಲು ಕತ್ತರಿಸಿಕೊಳ್ಳಲು ಕ್ಷೌರಿಕರ ಬಳಿ ಹೋದ ಉದಾಹರಣೆಗಳೂ ಇಲ್ಲ. ಹಾಗಂಥ ಅವರು ಹೇಗೆ ಬೇಕೋ ಆಗೇ ಕೂದಲುಗಳನ್ನು ಕತ್ತರಿಸಿಕೊಳ್ಳುವುದಿಲ್ಲ. ಅವರು ಮಾಡುವ ಹೇರ್ ಕಟಿಂಗ್ ನೋಡಿ ಪರಿಣಿತ ಹಾಗೂ ಅನುಭವಿ ಕ್ಷೌರಿಕರೇ ತಲೆ ಬಾಗಿದ್ದಾರೆ. ಅಚ್ಚರಿ ಎಂದರೆ ಗ್ರಾಮದ ವೀರಶೈವ ಕೋಮಿನ ಪಟೇಲ  ಹಾಗೂ ದಲಿತ ಯುವಕರ ಗೆಳೆತನ ಬೆಳೆಸಿರುವ ಲಿಂಗಾಯಿತ ಕೋಮಿನ ಅನೇಕರು ಇವರ ಬಳಿಯೇ ಹೇರ್ ಕಟ್ ಮಾಡಿಸುತ್ತಾರೆ. ಯಾರಿಗೇ ಕ್ಷೌರ ಮತ್ತು ಕಟ್ಟಿಂಗ್ ಮಾಡಿದರೂ ಹಣ ಪಡೆಯುವುದಿಲ್ಲ. ಹಾಗಾಗಿ ಈ ಕಾಲೋನಿಯ ಜನ ಕ್ಷೌರ ಮತ್ತು ಕೂದಲು ಕತ್ತರಿಸಿಕೊಳ್ಳಲು ಹಣ ಖರ್ಚು ಮಾಡುವುದಿಲ್ಲ. ಎಲ್ಲಾ ತರಹದ ಕೇಶ ವಿನ್ಯಾಸದಲ್ಲಿ ಸಿದ್ಧ ಹಸ್ತರಾದ ಇವರ ಕೌಶಲ್ಯ ಮೆಚ್ಚುವಂತಾದ್ದು. 


ಆದರೆ ಈ ಪರಿವರ್ತನೆಯ ಹಿಂದೆ ನೋವಿನ ಕಥೆಯಿದೆ. ಸ್ವಾಭಿಮಾನದ ಪ್ರಶ್ನೆಯಿದೆ.
ಹೌದು, ಈ ಊರಿನ ಇತಿಹಾಸದಲ್ಲಿ ದಲಿತ ವರ್ಗದ ಜನ ಕ್ಷೌರಿಕರಿಂದ ಕ್ಷೌರ ಮಾಡಿಸಿಕೊಳ್ಳುವುದು ಅಷ್ಟು ಸುಲಭವಾಗಿರಲಿಲ್ಲ. ಆಗ ಮೂಡನಂಬಿಕೆ, ಅಂಧಚಾರ, ಅಸ್ಪೃಶ್ಯತೆ ತೀಕ್ಷ್ಣವಾಗಿದ್ದ ಕಾಲ. ಸಾಕಷ್ಟು ಅವಮಾನಗಳು ನಡೆದಿವೆ, ಮನಸ್ಸು ನೊಂದಿವೆ. ನಮ್ಮ ತಾತ ಮತ್ತು ಅಪ್ಪಂದಿರು ಸಮಾಜದ ಕಟ್ಟು ಪಾಡಿಗೆ ಅಂಟಿಕೊಂಡು ಬದುಕುತ್ತಿದ್ದರು. ಅವರಿಗೆ ಜ್ಞಾನೋದಯವಾಗುವುದರೊಳಗೆ ನಮ್ಮ ಪೀಳಿಗೆಯ ಜನ ಹುಟ್ಟಿದ್ದರು ಎಂದು ತಮಗಾದ ಅನುಭವವನ್ನು ಬಿಚ್ಚಿಡುತ್ತಾರೆ ಗ್ರಾಮದ ಶೀಲ ಸಂಪನ್ನ ಎಂಬ ಯುವಕ









ದಲಿತ ಯುವಕ ಶಿವರಾಜು ಹೇಳುವ ಕಥೆ ಕೇಳಿ: ಹಿಂದೆ ಪಕ್ಕದ ಗ್ರಾಮದಲ್ಲಿದ್ದ ಒಬ್ಬ ಭಜಂತ್ರಿಯೇ ಮನಸ್ಸು ಮಾಡಿ ಎಲ್ಲರ ತಲೆ ಕೂದಲುಗಳನ್ನು ಕತ್ತರಿಸಿ, ಮುಖ ಕ್ಷೌರ ಮಾಡಬೇಕಿತ್ತು. ದಲಿತರ ಅಂತರ ಕಾಪಾಡಿಕೊಂಡು ಕ್ಷೌರಿಕ ತನ್ನ ಕೆಲಸ ಮುಗಿಸುತ್ತಿದ್ದ. ಅಲ್ಲದೇ ದಲಿತರಿಗಾಗಿಯೇ ಬೇರೆ ಪರಿಕರಗಳನ್ನು ಅಂಗಡಿಯ ಹೊರಗೆ ಮಡಗಿದ್ದನಂತೆ. ದಲಿತರ ಬಗ್ಗೆ ತೀರಾ ಅಸಡ್ಡೆ ತೋರುತ್ತಿದ್ದ ಆತ ಹೇರ್ ಕಟ್ಟಿಂಗ್ ಮತ್ತು ಕ್ಷೌರ ಮಾಡಿದ ನಂತರ ಸ್ನಾನ ಮಾಡಿ ಶುದ್ಧವಾಗುತ್ತಾ ಸ್ವತಃ ಅವನಾಗಿಯೇ ಮಡಿವಂತಿಕೆ ಆಚರಿಸಿಕೊಂಡಿದ್ದನಂತೆ.  ದಲಿತರ ಬಗ್ಗೆ ಅಷ್ಟೊಂದು ಪ್ರೀತಿ ತೋರದ ಕ್ಷೌರಿಕರೊಬ್ಬರಿಂದ ತಲೆ ಕೂದಲು ಕತ್ತರಿಸಿಕೊಂಡಿದ್ದ ನಮ್ಮ ಗ್ರಾಮದ ಯುವಕನೊಬ್ಬ ಮನಸ್ಸು ಬದಲಾಯಿಸಿ ತನ್ನ ಕೂದಲನ್ನು ತಾನೇ ಕಟ್ ಮಾಡಿಕೊಂಡಿದ್ದನಂತೆ. ಮನಸ್ಸು ಮತ್ತು ಛಲದಿಂದ ಆ ವಿದ್ಯೆ ಕರಗತ ಮಾಡಿಕೊಳ್ಳಲು ಸಾಹಸ ಮಾಡಿದ್ದನಂತೆ.
ಮೊದ ಮೊದಲು ಆತ ತನ್ನ ಮನೆಯಲ್ಲಿ ಒಂದು ಕನ್ನಡಿ ಹಿಡಿದುಕೊಂಡು ತನ್ನ ಕೂದಲನ್ನು ತಾನೇ ಕತ್ತರಿಸಿಕೊಂಡನಂತೆ. ಆದರೆ ಅವತ್ತು ಅದು ಸಮಾಜಕ್ಕೆ ಒಂದು ಹಾಸ್ಯದಂತೆ ಕಂಡರೂ ಮುಂದಿನ ಬದಲಾವಣೆಗೆ ನಾಂದಿಯಾಯಿತು. ದಿನೇ ದಿನೇ ಆತ ಶ್ರದ್ದೆಯಿಂದ ಪ್ರಯತ್ನಿಸುತ್ತಾ, ಕಲಿಯುತ್ತಾ ಉತ್ತಮವಾಗಿ ಕೂದಲು ಕತ್ತರಿಸುವುದನ್ನು ರೂಡಿ ಮಾಡಿಕೊಂಡನಂತೆ. ನಂತರ ತನ್ನ ಮನೆಯವರಿಗೆ, ಸಂಬಂಧಿಕರಿಗೆ ಬೇರೆಯವರಿಗೆ ಕೂದಲನ್ನು ನಾನಾ ವಿನ್ಯಾಸದಲ್ಲಿ ಕತ್ತರಿಸಲು ಆರಂಭಿಸಿದ. ಗ್ರಾಮದ ಇತರರು ಇವನಂತೆಯೇ ರೂಢಿಸಿಕೊಂಡರು. ಕೊನೆಗೆ ಅವರವರ ಮನೆಯವರ ಕೂದಲುಗಳನ್ನು ಅವರೇ ಕತ್ತರಿಸಿ, ವಿನ್ಯಾಸಗೊಳಿಸುತ್ತಿದ್ದರಂತೆ.
ಇಂದು ಗ್ರಾಮದ ಎಲ್ಲರೂ ಅಂದವಾಗಿ ಹೇರ್ ಕಟ್ ಮಾಡುತ್ತಾರೆ. ಹಿರಿಯ ಕಿರಿಯ ಎಂಬ ಬೇಧ ಭಾವವಿಲ್ಲದೇ ಎಲ್ಲರ ಕೈಗಳೂ ಚೆನ್ನಾಗಿ ಪಳಗಿವೆ. ಯಾರೂ ಬೇಕಾದರೂ ಯಾರನ್ನಾದರೂ ಕಟ್ಟಿಂಗ್ ಮಾಡುತ್ತಾರೆ. ದಾರಿಯಲ್ಲಿ ಹೋಗುವ ನಮ್ಮೂರಿನ ಹುಡುಗರನ್ನು ಬಾರೋ ಕಟಿಂಗ್ ಮಾಡು ಎಂದರೆ ತಕ್ಷಣ ಕತ್ತರಿ ಮತ್ತು ಬಾಚಣಿಗೆಯೊಂದಿಗೆ ಸಿದ್ಧವಾಗಿ ಪಟಾಪಟ್ ಎಂದು ಕತ್ತರಿಸಿ ಹೋಗುತ್ತಾರೆ. ಎಲ್ಲಾ ಸಿಂಪಲ್.  



 ಈಗ ಗ್ರಾಮದಲ್ಲಿ ಪ್ರತಿಯೊಬ್ಬ ಯುವಕನೂ ಅಂದವಾಗಿ, ಆಕರ್ಷಕವಾಗಿ ತಮ್ಮ ತಮ್ಮ ಕೂದಲುಗಳನ್ನು ಕತ್ತರಿಸಿಕೊಂಡು ನೋಡುಗರು ಗಮನಿಸುವಂತೆ ಸಿನಿಮಾ ನಟರಂತೆ ಮಿಂಚುತ್ತಿದ್ದಾರೆ. ಒಬ್ಬರ ಕೂದಲು ಇರುವಂತೆ ಮತ್ತೊಬ್ಬರ ಕೂದಲು ಇರುವುದಿಲ್ಲ. ಎಲ್ಲರದ್ದೂ ವಿಶೇಷ ಮತ್ತು ವಿಭೀನ್ನ ರೀತಿಯ ಆಕರ್ಷಕ ಕೇಶ ವಿನ್ಯಾಸಗಳೇ. ಮಾರಕಟ್ಟೆಯ ಯಾವುದೇ ಕೇಶ ವಿನ್ಯಾಸನ್ನೂ ಕೇಳಿದರೂ ಕ್ಷಣಾರ್ಧದಲ್ಲಿ ಮಾಡಿ ತೋರಿಸುತ್ತಾರೆ. ಹಾಗಂತ ಯಾರೂ ಅದನ್ನೇ ವೃತ್ತಿ ಮಾಡಿಕೊಂಡಿಲ್ಲ. 
ಮನಸ್ಸಿಗಿಂತ ದೊಡ್ಡದು ಯಾವುದೂ ಇಲ್ಲ. ಮನಸ್ಸು ಮಾಡಿದರೆ ಏನು ಬೇಕಾದರೂ ಸಾಧಿಸ ಬಹುದು ಎಂದು ಹೇಳುವ ಯುವಕರ ಒಂದೊಂದು ಮಾತುಗಳು ಆಳ ಮತ್ತು ಅರ್ಥ ಗರ್ಭಿತ. ಬೇರೆಯವರನ್ನ ಅವಲಂಬಿಸದೇ ತಮ್ಮ ಕೆಲಸಗಳನ್ನು ತಾವು ಶುದ್ಧವಾಗಿ ಮತ್ತು ಆತ್ಮತೃಪ್ತಿಗಾಗಿ ಮಾಡಿಕೊಳ್ಳುವುದರಲ್ಲಿ ಹಿತವಿದೆ ಎಂದು ಉಪದೇಶ ನೀಡುವ  ಅವರ ಅನುಭವ ಸಿದ್ಧ ಮಾತುಗಳಲ್ಲಿ ಚೈತನ್ಯವಿದೆ. ಸಮಯ, ಹಣ ಎರಡೂ ಉಳಿಯುತ್ತದೆ ಮತ್ತು ಮನಸ್ಸಿಗೆ ಸಂತೋಷವಾಗುತ್ತದೆ ಎಂದು ಎದೆ ಹುಬ್ಬಿಸಿ ಹೇಳುವಾಗ ಅವರ ಸಾಧನೆಯ ಬಗ್ಗೆ ಹೆಮ್ಮೆ ಎನಿಸುತ್ತದೆ. ಅಚ್ಚರಿ ಮತ್ತು ಆಸಕ್ತಿಯಿಂದ ಯಾರಾದರೂ ಬಂದರೆ ಅವರ ಮುಖಕ್ಕೆ ಹೊಂದುವ ಕೇಶ ವಿನ್ಯಾಸ ಮಾಡಿ, ತಮ್ಮ ಕೈ ಚಳಕ ತೋರಿಸಿ ನಾವು ಯಾರಿಗಿಂಥ ಕಮ್ಮಿ ಇಲ್ಲ ಎನ್ನುತ್ತಾರೆ ಈ ಛಲದಂಕಮಲ್ಲ ಸಾಧಕ ಯುವಕರು. ತಮ್ಮ ಸಾಧನೆಯ ಮೂಲಕ ಸಮಾಜಕ್ಕೆ ಒಂದು ತಣ್ಣನೆಯ ಮೌನ ಸಂದೇಶ ರವಾನಿಸಿದ್ದಾರೆ.

Courtesy : Tiptur Krishna

Saturday, 30 April 2011

ದಲಿತ ದೌರ್ಜನ್ಯ ಪ್ರಕರಣ: ಜಿಟಿಡಿ ಭೇಟಿ


ಹುಣಸೂರು,ಎ.30: ದಲಿತರ ಮೇಲೆ ಮೇಲ್ವರ್ಗದ ವ್ಯಕ್ತಿಗಳು ಹಲ್ಲೆ ನಡೆಸಿದ ಹಿನ್ನೆಲೆಯಲ್ಲಿ ಮುತ್ತುರಾಯನಹೊಸಳ್ಳಿ ಗ್ರಾಮಕ್ಕೆ ಶಾಸಕ ಎಚ್.ಪಿ. ಮಂಜು ನಾಥ್, ಗೃಹಮಂಡಳಿ ಅಧ್ಯಕ್ಷ ಜಿ.ಟಿ. ದೇವೇಗೌಡ, ವಿಧಾನ ಪರಿಷತ್ ಸದಸ್ಯ ಎಸ್.ಚಿಕ್ಕಮಾದು, ಭೇಟಿ ನೀಡಿದರು. ತಾಲೂಕಿನ ಮುತ್ತುರಾಯನಹೊಸಳ್ಳಿ ಗ್ರಾಮದ ವ್ಯಕ್ತಿಯೋರ್ವರ ಮಗಳ ಬೀಗರ ಔತಣದಲ್ಲಿ ದಲಿತರು ಚಪ್ಪಲಿ ಹಾಕಿ ಊಟಕ್ಕ ಕುಳಿತರೆಂಬ ಕಾರಣಕ್ಕೆ ದಲಿತರ ಮೇಲೆ ಮಂಜು ಎಂಬಾತ ಹಲ್ಲೆ ನಡೆಸಿದ್ದ. ನಂತರ ಸಂಜೆ ಕಲಹ ಮರು ಕಳಿಸಿದ್ದು, ಈ ಸಂದರ್ಭ 4 ಮಂದಿ ಮಹಿಳೆಯರು ಸೇರಿದಂತೆ ಒಟ್ಟು 10 ಮಂದಿ ದಲಿತರು ಗಾಯಗೊಂಡಿದ್ದರು.
ಈ ಹಿನ್ನೆಲೆಯಲ್ಲಿ ಗ್ರಾಮಕ್ಕೆ ಹಾಗೂ ಆಸ್ಪತ್ರೆಗೆ ಭೇಟಿ ನೀಡಿದ ಜಿ.ಟಿ. ದೇವೇಗೌಡ, ಮಂಜುನಾಥ್, ನೊಂದವರಿಗೆ ಸಾಂತ್ವನ ಹೇಳಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳು ವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು.

Thursday, 28 April 2011

ದಲಿತರಿಗೆ ಬಹಿಷ್ಕಾರ: ತಮಿಳುನಾಡು ಸರಕಾರಕ್ಕೆ ಹೈಕೋರ್ಟ್ ನೋಟಿಸ್

ಮಧುರೆ, ಎ.27: ತಮಿಳುನಾಡಿನ ವೇಲಾಯುಧಂಪುತೂರಿನಲ್ಲಿ ದಲಿತರಿಗೆ ಪ್ರತ್ಯೇಕ ಲೋಟಗಳ ವ್ಯವಸ್ಥೆ ಸಹಿತ ಜಾತಿ ತಾರತಮ್ಯ ವ್ಯಾಪಕವಾಗಿದೆಯೆಂದು ಆರೋಪಿಸಿ ಸಲ್ಲಿಸಲಾಗಿರುವ ಅರ್ಜಿಯೊಂದರ ಸಂಬಂಧ ಇಂದು ಮದ್ರಾಸ್ ಹೈಕೋರ್ಟ್‌ನ ಮಧುರೆ ಪೀಠವು ಗೃಹ ಕಾರ್ಯದರ್ಶಿ, ಆದಿದ್ರಾವಿಡ ಕಲ್ಯಾಣ ಕಾರ್ಯದರ್ಶಿ, ಡಿಂಡಿಗಲ್ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ಅಧೀಕ್ಷಕರಿಗೆ ನೋಟಿಸ್ ಜಾರಿಗೊಳಿಸುವಂತೆ ಆದೇಶಿಸಿದೆ. ತೆರುಕುತ್ತೇರು, ವೇಲಾಯುಧಂಪುತೂರು ಇತ್ಯಾದಿ ಸ್ಥಳಗಳಲ್ಲಿ ವಾಸಿಸುವ ದಲಿತರ ಸಾಮಾಜಿಕ ಬಹಿಷ್ಕಾರ ಮುಂದುವರಿದಿದೆ.

ಗ್ರಾಮದ ಚಹಾದಂಗಡಿ ಗಳ ಮಾಲಕರಾದ ಎಸ್. ಚೆಲ್ಲದುರೈ ಹಾಗೂ ಎನ್.ಕಾಮರಾಜ್ ಎಂಬವರು ಕೆಲವು ದಲಿತರಿಗೆ ಬಳಸಿ ಎಸೆಯಬಹುದಾದ ಲೋಟಗಳಲ್ಲಿ ಚಹಾ ನೀಡುತ್ತಿದ್ದರೆ, ದಲಿತರಲ್ಲದವರಿಗೆ ಗಾಜಿನ ಲೋಟಗಳಲ್ಲಿ ನೀಡುತ್ತಿದ್ದಾರೆ ಎಂದು ವೇಲಾಯುಧಂಪುತೂರ್‌ನ ಕೆ. ಕಾಳಿಯಪ್ಪನ್ ಎಂಬವರು ಸಲ್ಲಿಸಿರುವ ಅರ್ಜಿಯಲ್ಲಿ ದೂರಿದ್ದಾರೆ. ಗ್ರಾಮದಲ್ಲಿನ 1400 ಕುಟುಂಬಗಳಲ್ಲಿ 300 ಪರಿಶಿಷ್ಟ ಸಮುದಾಯದವರದಾಗಿವೆ. ಅವರನ್ನು ದಲಿತರಲ್ಲದವರ ಜತೆ ಒಂದೇ ಆಸನದಲ್ಲಿ ಕುಳಿತುಕೊಳ್ಳಲೂ ಬಿಡುತ್ತಿಲ್ಲ ಎಂದವರು ಆರೋಪಿಸಿದ್ದಾರೆ. ಗ್ರಾಮದ ಮೂರು ದೇವಳಗಳಲ್ಲಿ ದಲಿತರಿಗೆ ಪೂಜೆಗೆ ಅವಕಾಶವಿಲ್ಲ. ಕಳೆದ ವರ್ಷ ನ.15ರಂದು ದಲಿತರು ದಲಿತ ಕಲೆ ಹಾಗೂ ಸಾಹಿತ್ಯ ಸಂಘವೆಂಬ ಹೆಸರಿನ ಸಂಘಟನೆಯೊಂದರ ಉದ್ಘಾಟನೆಗೆ ನಿರ್ಧರಿಸಿದ್ದರು. ಆದರೆ ಪಳನಿಯ ಪೊಲೀಸ್ ಅಧಿಕಾರಿ ಅವರಿಗೆ ಅನುಮತಿ ನೀಡಲಿಲ್ಲ. ನ.14ರಂದು ನಾಲ್ವರು ದಲಿತ ನಾಯಕರನ್ನು ಪೊಲೀಸ್ ಠಾಣೆಯಲ್ಲಿ ಬಂಧಿಸಿಡಲಾಗಿತ್ತೆಂದು ಅರ್ಜಿದಾರರು ದೂರಿದ್ದಾರೆ.
ನ್ಯಾಯಮೂರ್ತಿಗಳಾದ ಕೆ.ಸುಗುಣಾ ಹಾಗೂ ಎ. ಆರ್ಮುಗಸ್ವಾಮಿ, ಗ್ರಾಮದ ಅಂಗಡಿದಾರರು ಸಹಿತ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸುವಂತೆ ಆದೇಶಿಸಿ ವಿಚಾರಣೆಯನ್ನು ಮುಂದೂಡಿದರು.

Mysore Hunsur Dalit land Issues


¥ÚÆ}ÚÂVæ «ÛÀ¾Úß J¥ÚWÒ

ÔÚßyÑÚàÁÚß: ÁÛdPÞ¾Úß ®ÚúÛÈÚOæQ ÈÚß{¥Úß ¥æàsÚu ÔÚßyÑÚàÁÚß ÑÚ.«ÚM. 19,2ÁÚ ¥ÚÆ}ÚÁÚ SÛÑÚW ºÚàÉß  }æÁÚÈÚâ´VæàØÒÁÚßÈÚ @ƒOÛ ÉÁÚߥڪ ¥ÚÆ}Ú ¥èd%«ÚÀ Oۿߥæ¾Úßt ÈæàOÚ¥Ú§Èæß ¥ÛRÄß ÈÚáÛt ¥ÚÆ}Ú ºÚà ÈÚáÛÆÞOÚÂVæ «ÛÀ¾Úß J¥ÚWÑÚßÈÚM}æ fÅÛÇ ¥ÚÑÚMÑÚ ÑÚM^ÛÄOÚ †æ×Úà¡ÁÚß ÈÚßÔÚ¥æÞÈÚâ´ ÈÚß}Úß¡ t. OÚßÈÚáÛÁé J}Û¡¿ßÒ¥Û§Áæ.

®Úloy¥Ú ÔæàÁÚÈÚľÚß¥Ú †æ×Úà¡ÁÚß VÛÃÈÚß¥Ú ÑÚ.«ÚM. 19.2 ÁÚÆÇ 2.09 VÚßMmæ ºÚàÉß¾Úß«Úß„ «ÚÁÚÒMÔÛ^Û @ÈÚÂM¥Ú OÚß×ÚÙ¾ÚßÀ GM…ÈÚÁÚß 1939 ÁÚÆÇ RÂÞ¦Ò¥Úß§, OÚM¥Û¾Úß BÅÛSæ «èOÚÁÚÁÚ †æÞdÈۆۧ¿ßM¥Ú AÁénÒ¾Úᒀ A¦ OÚ«Û%lOÚ¥ÚÈÚÁÚ ÈÚß«æ eÛVÚ GM¥Úß «ÚÈÚßà¦Ò OÚß×ÚÙ¾ÚßÀ«Ú ÈÚMËÚÑÚ¤ÂVæ @«ÛÀ¾ÚßÈæÑÚW¥æ.
B~¡Þ^æVæ fÅÛǃOÛÂVÚØVÚà ÑÚÔÚ }Ú®Úâý° ÈÚáÛÕ~ ¬Þt¥Ú§ÂM¥Ú C ºÚàÉß fÅÛǃOÛÂVÚ×Úß ÑÚOÛ% ºÚàÉß GM¥Úß }æÁÚÈÚâ´VæàØÑÚßÈÚM}æ A¥æÞËÚ ¬Þt¥Ú§ÁÚß. A¥ÚÁæ, C eÛVÚ¥ÚÆÇ OÚß×ÚÙ¾ÚßÀ«Ú ÈÚMËÚÑÚ¤ÁÛ¥Ú †æàÞÁÚÆMVÚ }ÚM†ÛOÚß ÔÚ¥ÚÈÚáÛsÚßÈÚ †ÛÀÁÚ«é 15 ÈÚÎÚ%VÚ×Ú ÕM¥æ¾æßÞ OÚno¥Ú§Áæ DØ¥ÚÈÚÁÚß, C eÛVÚÈÚ«Úß„ Õ}ڡīۄW ÈÚáÛtOæàMt¥Ú§ÁÚß. 
H.23ÁÚM¥Úß †æ×ÚVæX OÚM¥Û¾Úß ÔÛVÚà ®æãÆÞÑé BÅÛSæ¾ÚßÈÚÁÚß HOÛHP †ÛÀÁÚ«é, }æMW«ÚÈÚßÁÚ, }ÚM~ †æÞÆ P}Úß¡ÔÛP¥Úß§, B¥ÚÁÚ eæà}æ¾Úᒀ ÔÚ¥Ú ÈÚáÛtno¥Ú§ ÑÚßÈÚáÛÁÚß 2 ÄOÚÐ OÚàQ Ôæ^Úß` }ÚM†ÛOÚß ÑÚM®Úãy% ¨Ú´‡MÑÚVæàMt¥Úß§, Jlßo 5 ÄOÚÐ OÚàQ Ôæ^Úß` ÁÚß. «ÚÎÚoÈÚâ´MmÛW¥æ. 
}Ú¯°}ÚÑÚ¤ÁÚ ÉÁÚߥڪ ¥ÚÆ}Ú ¥èd%«ÚÀ }ÚsæOۿߥæ¾Úßt ÈæàOÚ¥Ú§Èæß ¥ÛRÄß ÈÚáÛt «ÚÎÚo¥Ú ÔÚyÈÚ«Úß„ ºÚÂÑÚßÈÚM}æ J}Û¡¿ßÒ¥ÚÁÚß. 
A¦eÛM…ÈÚ ÑÚMYÚ¥Ú @¨Ú´ÀOÚÐ OÛM}ÚÁÛdß, ÑÚߦ§VæàÞÏo¾Úᒀ eæ. ÈÚßÔÚ¥æÞÈÚ, t. OÚßÈÚáÛÁé, ^Ú«Ú„¾ÚßÀ, ¥ÛÑÚ¾ÚßÀ, GÑé. ÁÚÉ B¥Ú§ÁÚß. 
Thursday April 28 2011 02:14 IST



ದಲಿತರ ಪರ ಬಜೆಟ್‌ಗೆ ಮನವಿ


ಶಿವಮೊಗ್ಗದಲ್ಲಿ ಸೋಮವಾರ ಬಜೆಟ್‌ನಲ್ಲಿ ದಲಿತರ ಸಮಗ್ರ ಅಭಿವೃದ್ಧಿಗೆ ಕಾರ್ಯಕ್ರಮ ಘೋಷಿಸುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು
ಶಿವಮೊಗ್ಗ: ರಾಜ್ಯ ಸರ್ಕಾರ ಫೆ. 25ರಂದು ಮಂಡಿಸಲಿರುವ 2011-2012ನೇ ಸಾಲಿನ ಬಜೆಟ್‌ನಲ್ಲಿ ದಲಿತರ ಸಮಗ್ರ ಅಭಿವೃದ್ಧಿಗೆ ಪೂರಕವಾಗುವ ಕಾರ್ಯಕ್ರಮಗಳನ್ನು ಘೋಷಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿ, ಮನವಿ ಸಲ್ಲಿಸಿದರು.

ರಾಷ್ಟ್ರೀಯ ಯೋಜನಾ ಆಯೋಗದ ನಿರ್ದೇಶನದಂತೆ ಜನಸಂಖ್ಯಾವಾರು ಬಜೆಟ್‌ನಲ್ಲಿ ಪ್ರಾತಿನಿಧ್ಯ ನೀಡಬೇಕು.ಅದರಂತೆ ಪರಿಶಿಷ್ಟ ಜಾತಿ ಮತ್ತು ವರ್ಗಗಳ ಶೇ. 23ರಷ್ಟು ಹಣ ಏಕಗವಾಕ್ಷಿ ಮೂಲಕ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.

ಪರಿಶಿಷ್ಟ ಜಾತಿ ಮತ್ತು ವರ್ಗದ ನೌಕರರ ಆದಾಯ ಮಿತಿಯನ್ನು 1ಲಕ್ಷದಿಂದ 5ಲಕ್ಷ ರೂ.ಗಳಿಗೆ ಹೆಚ್ಚಿಸಬೇಕು. ಸರ್ಕಾರಿ ಭೂಮಿಯಲ್ಲಿ ಶೇ. 50ರಷ್ಟು ಪರಿಶಿಷ್ಟ ಜಾತಿ ಮತ್ತು ವರ್ಗಗಳ ಭೂಹೀನರಿಗೆ ಹಂಚುವ ಮೂಲಕ ಭೂ ಮಂಜೂರಾತಿ ಕಾಯ್ದೆಯನ್ನು ಕಡ್ಡಾಯವಾಗಿ ಅನುಷ್ಠಾನಗೊಳಿಸಬೇಕು ಎಂದು ಒತ್ತಾಯಿಸಿದರು.

1ರಿಂದ 10ನೇ ತರಗತಿವರೆಗಿನ ಶಾಲಾಮಕ್ಕಳಿಗೆ ನೀಡುತ್ತಿರುವ 100ರೂ. ಶಿಷ್ಯವೇತನವನ್ನು 1,000 ರೂ.ಗೆ ಹೆಚ್ಚಿಸಬೇಕು. ಮೆಟ್ರಿಕ್‌ಪೂರ್ವ ಮತ್ತು ಮೆಟ್ರಿಕ್ ನಂತರದ ಕಾಲೇಜು ಹಾಸ್ಟೆಲ್ ವಿದ್ಯಾರ್ಥಿಗಳಿಗೆ ನೀಡುತ್ತಿರುವ ಭೋಜನ ವೆಚ್ಚ 1,200 ರೂ.ಗಳಿಂದ 1,500ರೂ.ಗೆ ಹೆಚ್ಚಿಸಬೇಕು ಎಂದು ಆಗ್ರಹಿಸಿದರು.

ಖಾಸಗಿ ಹಾಗೂ ಸಹಕಾರಿ ಕ್ಷೇತ್ರಗಳಲ್ಲಿ ಸರ್ಕಾರ ಕಡ್ಡಾಯವಾಗಿ ಮೀಸಲಾತಿ ಜಾರಿಗೊಳಿಸಬೇಕು. ತಪ್ಪು ಮಾಹಿತಿ ನೀಡಿ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಪಡೆದು ಸರ್ಕಾರದ ಸೌಲಭ್ಯ ಕಬಳಿಸುತ್ತಿರುವವರ ಮೇಲೆ ಸುಪ್ರೀಂಕೋರ್ಟ್ ನಿರ್ದೇಶನದಂತೆ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿದರು.ಪ್ರತಿಭಟನೆಯ ನೇತೃತ್ವವನ್ನು ಡಿಎಸ್‌ಎಸ್‌ನ ಜಿಲ್ಲಾ ಸಂಚಾಲಕರಾದ ಚಿನ್ನಯ್ಯ, ಕೆ.ಎ. ರಾಜ್‌ಕುಮಾರ್, ಮುಖಂಡ ಆರ್. ಕೈಲಾಸ್ ಕುಮಾರ್ ಮತ್ತಿತರರು ವಹಿಸಿದ್ದರು.

ಒಗ್ಗಟ್ಟು: ದಲಿತ ಸಂಘಟನೆಗಳಿಗೆ ಚಂಪಾ ಸಲಹೆ


ಒಗ್ಗಟ್ಟು: ದಲಿತ ಸಂಘಟನೆಗಳಿಗೆ ಚಂಪಾ ಸಲಹೆ
ಪ್ರಜಾವಾಣಿ ವಾರ್ತೆ
'ರಾಜ್ಯದಲ್ಲಿನ ಬಹಳಷ್ಟು ಚಳವಳಿಗಳು ಕುಸಿಯಲು ಹೊರಗಿನ ಆಕ್ರಮಣಗಳಿಂತ ಒಳಗಿನ ವೈರುಧ್ಯಗಳೇ ಕಾರಣವಾಗಿವೆ. ಬಂಡಾಯ ಸಾಹಿತ್ಯ ಸಂಘಟನೆ, ಲೋಹಿಯಾ, ಅಂಬೇಡ್ಕರ್, ಮಾರ್ಕ್ಸ್‌ವಾದ, ರೈತ ಸಂಘಟನೆ ದಲಿತರನ್ನು ಆಕರ್ಷಿಸಲು ಸಫಲವಾಗಲಿಲ್ಲ'


ಶಿವಮೊಗ್ಗದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ‘ದಲಿತ ಲೇಖಕರ, ಕಲಾವಿದರ ರಾಜ್ಯ ಸಮ್ಮೇಳನ-2’ವನ್ನು ಸಾಹಿತಿ ಚಂದ್ರಶೇಖರ ಪಾಟೀಲ ಉದ್ಘಾಟಿಸಿದರು. ಗೋಪಜ್ಜಿ ನಾಗಪ್ಪ, ರುದ್ರಪ್ಪ ಹನಗವಾಡಿ, ಕೆ.ಟಿ. ಶಿವಪ್ರಸಾದ್, ಡಾ.ಶ್ರೀಕಂಠ ಕೂಡಿಗೆ, ಇಂದಿರಾ ಕೃಷ್ಣಪ್ಪ ಮತ್ತಿತರರು ಚಿತ್ರದಲ್ಲಿದ್ದಾರೆ.    
ಶಿವಮೊಗ್ಗ:
 ದಲಿತ ಸಂಘಟನೆಗಳು ತಮ್ಮೆಲ್ಲಾ ಬಣ ಮತ್ತು ವಾದಗಳನ್ನು ಕಳಚಿಕೊಂಡು ಏಕಶಕ್ತಿಯಾಗಿ ರೂಪುಗೊಳ್ಳುವ ಆವಶ್ಯಕತೆ ಇದೆ ಎಂದು ಸಾಹಿತಿ ಚಂದ್ರಶೇಖರ ಪಾಟೀಲ ಇಲ್ಲಿ ಶುಕ್ರವಾರ ಪ್ರತಿಪಾದಿಸಿದರು.

 ನಗರದ ಕುವೆಂಪು ರಂಗಮಂದಿರದಲ್ಲಿ ಪ್ರೊ.ಬಿ.ಕೃಷ್ಣಪ್ಪ ಟ್ರಸ್ಟ್ ಮತ್ತು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ ವಾದ) ಸಂಯುಕ್ತವಾಗಿ ಏರ್ಪಡಿಸಿದ್ದ ಎರಡು ದಿನಗಳ ‘ದಲಿತ ಲೇಖಕರ, ಕಲಾವಿದರ ರಾಜ್ಯ ಸಮ್ಮೇಳನ-2’ನ್ನು ಉದ್ಘಾಟಿಸಿ ಅವರು ಮಾತನಾಡಿದರು. ದಲಿತ ಹೋರಾಟ ಎಂದರೆ ಅದು ಅಂಬೇಡ್ಕರ್ ಹೋರಾಟವೇ ಆಗಿರುತ್ತದೆ. ಹಾಗಾಗಿ, ದಲಿತ ಸಂಘ, ಬಣ, ವಾದಗಳೆಂಬ ಅಗ್ರಹಾರಗಳನ್ನು ಕಟ್ಟಿಕೊಳ್ಳಬೇಕಾಗಿಲ್ಲ. ಮೂಲ ಸಂಘಟನೆ ಸರಿಯಾಗಿ ಇದ್ದರೆ ಈ ರೀತಿ ಬಣಗಳು ಹುಟ್ಟಿಕೊಳ್ಳುತ್ತಿರಲಿಲ್ಲ ಎಂದು ವಿಷಾದಿಸಿದರು.

 ರಾಜ್ಯದಲ್ಲಿನ ಬಹಳಷ್ಟು ಚಳವಳಿಗಳು ಕುಸಿಯಲು ಹೊರಗಿನ ಆಕ್ರಮಣಗಳಿಂತ ಒಳಗಿನ ವೈರುಧ್ಯಗಳೇ ಕಾರಣವಾಗಿವೆ. ಬಂಡಾಯ ಸಾಹಿತ್ಯ ಸಂಘಟನೆ, ಲೋಹಿಯಾ, ಅಂಬೇಡ್ಕರ್, ಮಾರ್ಕ್ಸ್‌ವಾದ, ರೈತ ಸಂಘಟನೆ ದಲಿತರನ್ನು ಆಕರ್ಷಿಸಲು ಸಫಲವಾಗಲಿಲ್ಲ. ವರ್ಣ, ವರ್ಗದ ಹೋರಾಟದಲ್ಲಿ ಎಲ್ಲರೂ ವರ್ಗವನ್ನು ಗುರಿ ಮಾಡಿದರೇ ಹೊರತು, ಜಾತಿಯನ್ನು ಪ್ರಧಾನವಾಗಿಟ್ಟುಕೊಳ್ಳಲಿಲ್ಲ. ಹಾಗಾಗಿ, ದಲಿತರು ಅದರಿಂದ ಹೊರ ಬರಬೇಕಾಯಿತು ಎಂದು ವಿಶ್ಲೇಷಿಸಿದರು.

ತರೀಕೆರೆ ಏರಿಯಾ: ಧಮ್ಮದೀಕ್ಷೆಯೂ, ಯಶೋಧರೆಯರ ಕಷ್ಟಗಳೂ


By ರಹಮತ್ ತರೀಕೆರೆ
ನನಗೊಮ್ಮೆ ಕರ್ನಾಟಕದ ಬೌದ್ಧಧರ್ಮಕ್ಕೆ ಸಂಬಂಧಿಸಿದ ಜನರನ್ನೂ ಜಾಗಗಳನ್ನೂ ಕಣ್ಣಾರೆ ಕಾಣುವ ಆಸೆ ಮೊಳೆಯಿತು. ಆಸೆಯನ್ನು ಧಾರವಾಡದ ವೈದ್ಯಮಿತ್ರರಾದ ಡಾ. ಸಂಜೀವ ಕುಲಕರ್ಣಿಯವರಲ್ಲಿ ಹಂಚಿಕೊಂಡೆ. ಬೌದ್ಧಧರ್ಮದ ಬಗ್ಗೆ ಒಳಸೆಳೆತವುಳ್ಳ ಅವರು ಕೂಡಲೇ ಸೈಯೆಂದು ಒಪ್ಪಿಕೊಂಡರು. ಇಬ್ಬರೂ ಸೇರಿ, ತಿರುಗಾಟದ ಪಥವನ್ನೂ ನೋಡಬೇಕಾದ ಜಾಗವನ್ನೂ ಕಾಣಬೇಕಾದ ಜನರನ್ನೂ  ಗುರುತು ಮಾಡಿಕೊಳ್ಳುತ್ತ ತಯಾರಿ ನಡೆಸಲಾರಂಭಿಸಿದೆವು. ಇದರ ಪತ್ತೆಯನ್ನು ಹೇಗೊ ಮಾಡಿದ ಮೈಸೂರಿನ ಗೋವಿಂದಯ್ಯನವರು ನಾನೂ ಬರುತ್ತೇನೆಂದು ಗಂಟುಬಿದ್ದರು. ಕಡೆಗೆ ತಂಡಕ್ಕೆ ತರುಣ ಕವಿ ಅರುಣ್ ಜೋಳದಕೂಡ್ಲಿಗಿಯನ್ನೂ ಸೇರಿಸಿಕೊಂಡೆವು.
ನಾವು ನಾಲ್ವರು, ಆಕಸ್ಮಿಕವಾಗಿ ಸಮಾಜದ ನಾಲ್ಕು  ಸ್ತರಗಳಿಂದ ಬಂದವರಾಗಿದ್ದು, ಬುದ್ಧನ ನೆಪದಲ್ಲಿ ಒಂದಾಗಿದ್ದೆವು. ಆಯಾ ದಿನ ಸಿಕ್ಕ ಅನುಭವವನ್ನು ನಾಲ್ವರೂ ಸೇರಿ ಚರ್ಚಿಸುತ್ತಿದ್ದೆವು. ಭಿನ್ನಮತಗಳನ್ನು ಇಟ್ಟುಕೊಂಡು ಜಗಳ ಮಾಡುತ್ತಿದ್ದೆವು. ನಮ್ಮ ಜತೆ ಒಂದು ಹೆಂಜೀವವೂ ಇದ್ದಿದ್ದರೆ, ತಂಡಕ್ಕೆ ಬೇರೊಂದು ಕಣ್ಣು ಒದಗಿರುತ್ತಿತ್ತೇನೊ? ಆದರೆ ಹೊರಡುವಾಗ ಹಾಗೆ ಯಾರೂ ನಮಗೆ ಸಿಗಲಿಲ್ಲ. ನಿಜ ಹೇಳಬೇಕೆಂದರೆ, ನಾವು ಈ ದಿಸೆಯಲ್ಲಿ ಚಿಂತಿಸಲಿಲ್ಲ. ಮನೆಮಡದಿ ಯಶೋಧರೆಯ ಹಂಗಿಲ್ಲದೆ ತಿಳಿವಳಿಕೆಯ ಹುಡುಕಾಟಕ್ಕೆ ಹೊರಟ ಬುದ್ಧನ ನಾಡಿನವರು ತಾನೇ ನಾವು?
ಧಾರವಾಡದಿಂದ ಪಯಣ ಆರಂಭಿಸಿ ಕರ್ನಾಟಕವನ್ನು ಅದರಂಚಿನಲ್ಲೇ ಚಲಿಸುತ್ತ ಒಂದು ಸುತ್ತು ಹಾಕಿದೆವು. ಸುಮಾರು 1500 ಕಿಮಿ ಉದ್ದದ 15 ದಿನಗಳ ಪಯಣ. ಇದರಲ್ಲಿ ನಾವು ಬೌದ್ಧ ವಿಹಾರಗಳನ್ನೂ  ಚೈತ್ಯಾಲಯಗಳನ್ನೂ ಬೌದ್ಧಮೂರ್ತಿಗಳನ್ನೂ ಕಂಡೆವು; ಧಮ್ಮಸ್ವೀಕಾರದ ಬಳಿಕ ಅಶೋಕನು ಕರ್ನಾಟಕದಲ್ಲಿ ಹಾಕಿಸಿದ ಶಾಸನಗಳನ್ನು ಕಂಡೆವು; ಬೌದ್ಧಧರ್ಮದ ಬೋಧನೆ ನಡೆಯುತ್ತಿದ್ದ ಗುರುಕುಲಗಳನ್ನೂ ಬುದ್ಧನ ಹೆಸರಲ್ಲಿ ಕಟ್ಟಲಾಗಿರುವ ಶಿಕ್ಷಣ ಸಂಸ್ಥೆಗಳನ್ನೂ ಭೇಟಿಮಾಡಿದೆವು; ಬೌದ್ಧ ಚಿಂತಕರನ್ನೂ ಭಂತೆಗಳನ್ನೂ ಸಾಧಕರನ್ನೂ ಕಂಡು ಮಾತಾಡಿದೆವು. ತಮ್ಮ ರಾಜಕೀಯ ಕಾರ್ಯಕ್ರಮದ ಭಾಗವಾಗಿ ಧಮ್ಮಪ್ರಸಾರ ಕೈಗೊಂಡಿರುವ ಬಿಎಸ್ಪಿ ಕಾರ್ಯಕರ್ತರ ಜತೆ ಚರ್ಚಿಸಿದೆವು. ಬೌದ್ಧಸಂಪ್ರದಾಯದಲ್ಲಿ ಲಗ್ನವಾಗಿರುವ ದಂಪತಿಗಳನ್ನೂ ಧಮ್ಮದೀಕ್ಷೆ ಪಡೆದು ಹೊಸಬದುಕನ್ನು ನಡೆಸುತ್ತಿರುವ ಕುಟುಂಬಗಳನ್ನೂ ಕಂಡೆವು. ಒಟ್ಟಿನಲ್ಲಿ ಅದೊಂದು ಅಪೂರ್ವ ಬೌದ್ಧಯಾನ.
ಈ ಯಾನದಲ್ಲಿ ಮೂರು ಅಂಶಗಳು ಗೋಚರಿಸಿದವು. 1. ಕರ್ನಾಟಕದಲ್ಲಿ ಒಂದು ಕಾಲಕ್ಕೆ ವ್ಯಾಪಕ ಅಸ್ತಿತ್ವವನ್ನು ಹೊಂದಿದ್ದ ಬೌದ್ಧಧರ್ಮವು, ಸದ್ಯಕ್ಕೆ ತನ್ನ ಗತಕಾಲದ ಅವಶೇಷಗಳ ಮೂಲಕ ಉಸಿರೆಳೆಯುತ್ತಿದ್ದ ಪಳೆಯುಳಿಕೆಗಳು 2. ಧಮ್ಮದೀಕ್ಷೆ ಸ್ವೀಕರಿಸಿರುವ ಸಾವಿರಾರು ಜನರ ಬಾಳಿನಲ್ಲಿ ಹೊಸಹೊಸ ರೂಪದಲ್ಲಿ ನೆಲೆಯೂರುತ್ತ ಅದು ಚಿಗುರೊಡೆಯುತ್ತಿದ್ದುದು. 3. ಹಾಗೆ ಚಿಗುರೊಡೆಯುವ ಪ್ರಕ್ರಿಯೆಯಲ್ಲಿ ಮನೆಗಳನ್ನು ಮನಸ್ಸುಗಳನ್ನು ಸಂಬಂಧಗಳನ್ನು ಕೂಡ ಒಡೆದುಕೊಂಡಿರುವುದು. ಒಂದು, ಚರಿತ್ರೆಯ ಸ್ಥಗಿತ ದರ್ಶನವಾದರೆ, ಮತ್ತೆರಡು ವರ್ತಮಾನದ ಚಲನಶೀಲ ದರ್ಶನ; ಒಂದು, ಭಗ್ನತೆಯ ಮುಖವಾದರೆ, ಇನ್ನೆರಡು ಹೊಸಹುಟ್ಟಿನ ಮತ್ತು ಹೊಸಬಿಕ್ಕಟ್ಟಿನ ಮುಖಗಳು. ಒಂದು ಸ್ಮಾರಕಗಳ ಜಗತ್ತಾದರೆ ಇನ್ನೆರಡು ಭಾವನೆಗಳ ಮಾನುಷ ಜಗತ್ತು.

ನಮಗೆ ಕಾಡಿಸುತ್ತಿದ್ದುದು ಧಮ್ಮವು ನೆಲೆಯೂರುತ್ತಿರುವ ಕಡೆ ಹುಟ್ಟಿರುವ ಬಿರುಕು ಮತ್ತು ಬಿಕ್ಕಟ್ಟುಗಳು. ಇವು ಧಮ್ಮದೀಕ್ಷೆ ಪಡೆದ ಕುಟುಂಬದಲ್ಲಿ ವ್ಯಕ್ತಿವ್ಯಕ್ತಿಗಳ ನಡುವೆ; ಕೇರಿ ಮತ್ತು ಕುಟುಂಬಗಳ ನಡುವೆ ಬಿದ್ದಿರುವ ಕಂದರದಲ್ಲಿ ಕಾಣುತ್ತಿದ್ದವು; ದಲಿತರ ಎರಡು ಬಣಗಳ ನಡುವೆ ನಡೆಯುತ್ತಿದ್ದ ಸಂಘರ್ಷದ ರೂಪದಲ್ಲಿದ್ದವು. ಯಾವುದೇ ಹಳೆಯ ರೂಪದ ಜಾಗವನ್ನು ಹೊಸತೊಂದು ಆಕ್ರಮಿಸುವಾಗ, ಇಂತಹ ಸಂಘರ್ಷ ಸಾಮಾನ್ಯ. ಹೊಸತು ಮತ್ತು ಹಳತುಗಳ ಈ ಸಂಘರ್ಷವು ಕೆಲವು ಕಾಲದ ಬಳಿಕ ಸಾಮರಸ್ಯಗೊಂಡು ಮೂರನೆಯ ಹೊಸರೂಪವಾಗಿ ಸಿದ್ಧವಾಗಬಹುದು. ಅಂತಹ ಹೊಸರೂಪವೊಂದು ಸಿದ್ಧವಾಗುವ ತನಕ ಈ ಜಗ್ಗಾಟಗಳು ಸಹಜ. ಆದರೆ ಸಾಮಾಜಿಕ ಧಾರ್ಮಿಕ ಮಾನಸಿಕ ಹಾಗೂ ಸಾಂಸ್ಕೃತಿಕವಾದ ಈ ಜಗ್ಗಾಟಗಳ ನಡುವೆ ಸಿಕ್ಕು ನಲುಗುತ್ತಿರುವವರ ತೊಳಲಾಟ ಮತ್ತು ಹತಾಶೆಗಳನ್ನು ಹೆಚ್ಚಿನವರು ಲೆಕ್ಕಿಸಿದಂತೆ ಕಾಣುತ್ತಿರಲಿಲ್ಲ. ಮಾನವೀಯವೂ ಸಂಕೀರ್ಣವೂ ಆಗಿರುವ ಈ ನೋವು ಸಂಕಟಗಳನ್ನು ಸರಿತಪ್ಪುಗಳೆಂದು ಸರಳವಾಗಿ ತೀರ್ಮಾನಿಸುವುದು ಕಷ್ಟ. ಹೀಗಾಗಿ ಇವು ಯಾಕೆ ಮತ್ತು ಹೇಗೆ  ಮೂಡಿದವು ಎಂದು ಅರ್ಥಮಾಡಿಕೊಳ್ಳಲು ಯತ್ನಿಸಬಹುದು.

ಎರಡು ವಾರಗಳ ನಮ್ಮ ಧಮ್ಮಯಾನದಲ್ಲಿ ಧಮ್ಮದೀಕ್ಷೆ ಪಡೆದ ಹತ್ತಾರು ಕುಟುಂಬಗಳನ್ನು ನಾವು ಭೇಟಿ ಮಾಡಿದೆವು. ಇವುಗಳಲ್ಲಿ ಏಳು ದಲಿತ ಕುಟುಂಬಗಳು. ಒಂದು ಬ್ರಾಹ್ಮಣ. ಎರಡು ಬಂಟರವು. ಕೊನೆಯ ಮೂರು ಕರಾವಳಿಯವು; ಮೊದಲ ಏಳು ದಲಿತ ಕುಟುಂಬಗಳು ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ, ಗುಲಬರ್ಗ ಜಿಲ್ಲೆಗೆ ಸೇರಿದವು. ಎಲ್ಲ ಕುಟುಂಬಗಳೂ ಆಧುನಿಕ ಶಿಕ್ಷಣಕ್ಕೆ ತೆರೆದುಕೊಂಡವು; ಉಡಲುಣ್ಣಲು ಹೋರಾಟವಿಲ್ಲದ ಮಧ್ಯಮವರ್ಗಕ್ಕೆ ಸೇರಿದವು. ಈ ಕುಟುಂಬಗಳ ಜತೆ ನಾವು ಮಾತಾಡಿದೆವು. ಜತೆ ಕುಳಿತು ಊಂಡೆವು. ಅಲ್ಲಿ ನಮಗೆ ನಾಲ್ಕು ಪರಿಯ ದಾಂಪತ್ಯಗಳು ಕಂಡವು.
1. ಇಡಿಯಾಗಿ ಧಮ್ಮೀಕರಣಗೊಂಡಿರುವ ದಾಂಪತ್ಯಗಳು. ಇಲ್ಲಿ ದಂಪತಿಗಳಲ್ಲಿ ಸತಿಪತಿಗಳೊಂದಾದ ಭಕ್ತಿಯ ಸಾಮರಸ್ಯವಿತ್ತು. ಸಮಾನಮನಸ್ಕತೆ ಸಾಧ್ಯವಾಗಿತ್ತು. ಹಳೆಯ ಸಂಪ್ರದಾಯಗಳು ಕೈಬಿಟ್ಟುಹೋಗಿದ್ದವು. ಮಕ್ಕಳಿಗೆ ಬೌದ್ಧಹೆಸರುಗಳನ್ನು ಇಡುವುದೇ ಮುಂತಾಗಿ ಬೌದ್ಧ ಆಚರಣೆಗಳು ಆಚರಣೆಗೆ ಬಂದಿದ್ದವು. ಇವು ದೀಕ್ಷೆಗೊಂಡು ದಶಕಗಳನ್ನೆ ಕಳೆದಿರುವ ಕುಟುಂಬಗಳು. ಗುಲಬರ್ಗದ ಬುದ್ಧವಿಹಾರದಲ್ಲಿದ್ದ ಶ್ರೀಮತಿ ಖರ್ಗೆಯವರಲ್ಲಿ, ಮಲ್ಲಿಕಾರ್ಜುನ ಖರ್ಗೆಯವರಷ್ಟೇ ಧರ್ಮದ ಉಮೇದಿತ್ತು. ಆದರೂ ಇಲ್ಲಿ ಹೆಚ್ಚಿನ ಕಡೆ ಗಂಡನೇ ಸಾಧಕನಾಗಿದ್ದು, ಮಡದಿ ಅವನಿಗೆ ಸಹಚರಳಾಗಿ ಹಿಂಬಾಲಿಸಿದಂತೆ ಇತ್ತು.
2. ಇನ್ನೂ ಹೊಂದಾಣಿಕೆಯ ಪ್ರಕ್ರಿಯೆಯಲ್ಲಿರುವ ದಾಂಪತ್ಯಗಳು. ಇಲ್ಲಿ ಹೊಸಧರ್ಮದ ಬಗ್ಗೆ ಪೂರಾ ಒಪ್ಪಿಗೆ ಸಾಧ್ಯವಾಗಿರಲಿಲ್ಲ. ಆದರೂ, ಹಳತರ ಜತೆಗೆ ಒಂದು ಬಗೆಯ ಸಾಮರಸ್ಯ ಮಾಡಲು ಯತ್ನ ನಡೆದಿತ್ತು. ಉದಾ.ಗೆ, ಒಂದು ಮನೆಯಲ್ಲಿ ಹೊರಬಾಗಿಲ ಮೇಲೆ ಕೆತ್ತಲಾಗಿದ್ದ ಬುದ್ಧಮೂರ್ತಿಯ ಹಣೆಗೆ ವಿಭೂತಿಯನ್ನು ಬಳಿಯಲಾಗಿತ್ತು. ಅದು ಬುದ್ಧನನ್ನು ಪಳಗಿಸುತ್ತ ಸ್ಥಳೀಕರಿಸುತ್ತಿರುವ ಯತ್ನದಂತೆ ತೋರಿತು; ಇನ್ನೊಂದು ಮನೆಯ ದೇವರಕೋಣೆಯಲ್ಲಿ ಬುದ್ಧನ ಮೂರ್ತಿಯ ಜತೆಗೆ ಅಂಬೇಡ್ಕರ್ ಮತ್ತು ಮಲೆಮಾದೇಶ್ವರನ ಫೋಟೊಗಳನ್ನೂ ಭೇದವಿಲ್ಲದೆ ಇಡಲಾಗಿತ್ತು. ಇವೆಲ್ಲ ಧಮ್ಮದೀಕ್ಷೆ ಪಡೆದು  ಒಂದೆರಡು  ವರ್ಷಗಳಾಗಿದ್ದ ಕುಟುಂಬಗಳು.
3. ಸಾಮರಸ್ಯದ ಸಾಧ್ಯವಾಗಿರದೆ ತೊಳಲಾಟ ನಡೆಯುತ್ತಿರುವ ಕುಟುಂಬಗಳು. ಇಲ್ಲಿ ಧಮ್ಮಸ್ವೀಕಾರದ ವಿಷಯದಲ್ಲಿ ಸತಿಪತಿಗಳು ಸಮಾನ ಮನಸ್ಕರಾಗಿರಲಿಲ್ಲ. ಹೊಸಧಮ್ಮದ ವಿಷಯದಲ್ಲಿ ಗಂಡ ಉತ್ಸಾಹಿಯಾಗಿದ್ದರೆ, ಮಡದಿಯ ಮೊಗದಲ್ಲಿ ಮ್ಲಾನತೆಯಿತ್ತು. ಗಂಡನಿಗೆ ಬೇಸರವಾಗಬಾರದೆಂದೊ ಅಥವಾ  ಭಿನ್ನಮತವನ್ನು ಬಂದವರೆದುರು ತೋರಬಾರದೆಂದೊ ಆಕೆ  `ಅಳುವೇ ತುಟಿಗೆ ಬಂದಂತೆ' ಮೌನವಹಿಸಿದಂತೆ ಕಾಣುತ್ತಿತ್ತು. ಗಂಡನ ಮುಖದಲ್ಲಿ ಮನೆಯಲ್ಲಿ ನೆಲೆಸುತ್ತಿರುವ ಧಮ್ಮಸಂಸ್ಕೃತಿಯ ಬಗ್ಗೆ ಸಂತೋಷದ ಭಾವವಿದ್ದರೆ, ಆಕೆಯ ಮುಖದಲ್ಲಿ ಆತಂಕವಿತ್ತು. ಆಕೆ ಗಂಡನ ಒತ್ತಡಕ್ಕೆ ಬೌದ್ಧ ಆಚರಣೆಗಳನ್ನು ಅನಿವಾರ್ಯವಾಗಿ ಯಾಂತ್ರಿಕವಾಗಿ ಮಾಡುತ್ತಿರುವಂತೆ ತೋರಿತು.
4. ಸಾಮರಸ್ಯ ಸಾಧ್ಯವೇ ಆಗದೆ ಸಂಬಂಧ ಕುಸಿದುಬಿದ್ದಿರುವ ಕುಟುಂಬಗಳು. ಇಲ್ಲಿ ಮಹಿಳೆಯರಿಗೆ  ತಾವು ಹುಟ್ಟಿ ಬೆಳೆದು ಬಂದ ಪಾರಂಪರಿಕ ಧಾರ್ಮಿಕ ಸಂಸ್ಕೃತಿಯನ್ನು ಬಿಟ್ಟುಕೊಡುವುದು ಸಾಧ್ಯವಾಗಿರಿಲ್ಲ. ಅವರಿಗೆ ಬುದ್ಧನ ಬಗ್ಗೆ ಅಸಹನೆಯೇನಿರಲಿಲ್ಲ. ಆದರೆ ತನ್ನನ್ನು ಬಾಲ್ಯದ ದೈವಗಳಿಂದ ಬಿಡಿಸುತ್ತಿರುವ ಮತ್ತು ಬುದ್ಧನನ್ನು ಹೇರುತ್ತಿರುವ ಗಂಡನ ಬಗ್ಗೆ ಅಸಮಾಧಾನವಿತ್ತು. ನಮ್ಮ ಧಾರ್ಮಿಕ ಸ್ವಾತಂತ್ರ್ಯಕ್ಕೆ ಮನ್ನಣೆಯಿಲ್ಲವಲ್ಲ ಎಂಬ ಕೊರಗು ಒಳಗೊಳಗೇ ಆವಿಗೆಯ ಬೆಂಕಿಯಂತೆ ಸುಳಿಯುತ್ತಿತ್ತು. ಇದು ಒಂದು ಕಡೆ ಲಾವರಸದಂತೆ ಆಸ್ಫೊಟಗೊಂಡಿತು ಕೂಡ. ಕರ್ನಾಟಕದ ಲೀವಿಂಗ್ ಬುದ್ಧಿಸಂನ ಅಧ್ಯಯನಕ್ಕೆ ಹೊರಟ ನಮಗೆ ಇದು ಹೊಸದೊಂದು ತಿಳಿವಿನ ಕೋನವನ್ನು ನೀಡಿತು.

ಈ ಆಸ್ಫೋಟ ಸಂಭವಿಸಿದ್ದು ಒಂದು ದಲಿತ ಕುಟುಂಬದಲ್ಲಿ. ಇಲ್ಲಿ ಗಂಡ ಹೆಂಡತಿಯಿಬ್ಬರೂ ಉನ್ನತ ಶಿಕ್ಷಣ ಪಡೆದವರು. ಇವರಲ್ಲಿ ಗಂಡ ಧಮ್ಮದೀಕ್ಷೆ ಸ್ವೀಕರಿಸಿದ್ದರು. ಮಾತ್ರವಲ್ಲ. ಕಾವಿಧರಿಸಿ, ತಮ್ಮ ಹೆಸರನ್ನು ಬದಲಿಸಿಕೊಂಡು ಭಂತೆ ಕೂಡ ಆಗಿದ್ದರು. ಧಮ್ಮ ಪ್ರಸಾರದಲ್ಲಿ ಅತಿ ಉಮೇದಿನಲ್ಲಿ ತೊಡಗಿಸಿಕೊಂಡಿದ್ದರು. ಅವರನ್ನು ಕಾಣುವುದು ನಮ್ಮ ಉದ್ದೇಶವಾಗಿತ್ತು. ಆದರೆ ಅವರು ಮನೆಯಲ್ಲಿ ಇಲ್ಲವೆಂದೂ ಬಿಹಾರದ ಬೌದ್ಧಗಯಾಕ್ಕೆ ಹೋಗಿದ್ದಾರೆಂದೂ ಅವರು ಶಿಷ್ಯರು ತಿಳಿಸಿದರು. ಆದರೂ ಮನೆಗೆ ತೆರಳಿ, ಅವರ ಮಡದಿಯ ಅಭಿಪ್ರಾಯವನ್ನು ಪಡೆಯೋಣವೆಂದು ಹೊರಟೆವು. ಸಂಜೆ ಏಳರ ಹೊತ್ತು. ಭಿಕ್ಕು ಅವರ ಮನೆಗೆ ಹೋಗಿ ಬಾಗಿಲನ್ನು ತಟ್ಟಿದೆವು. ಒಳಗಿಂದ ಒಬ್ಬರು ಮಹಿಳೆ ಬಾಗಿಲನ್ನು ಅರೆತೆಗೆದು ಏನು ಬೇಕಿತ್ತು ಎಂಬಂತೆ ಹುಬ್ಬುನಿರಿಗೆ ಮಾಡಿಕೊಂಡು ನಮ್ಮನ್ನು ನೋಡಿದರು. ಅವರ ಹಣೆಯಲ್ಲಿ ವಿಭೂತಿಯಿತ್ತು. ``ನಾವು ಬೌದ್ಧಧರ್ಮದ ಅಧ್ಯಯನ ಮಾಡುವುದಕ್ಕೆ ಬಂದವರು. ಭಂತೇಜಿಯಿದ್ದರೆ ಅವರ ಜತೆ ಮಾತಾಡಬೇಕಿತ್ತು'' ಎಂದೆವು. `ಬೌದ್ಧ' `ಭಂತೆ' ಎಂಬ ಶಬ್ದಗಳನ್ನು ಕೇಳುತ್ತಿದ್ದಂತೆ ಆಕೆಯ ಮುಖ ಬಿರುಸಾಯಿತು. ಕಣ್ಣು ಕನಲಿದವು. ಗಡುಸಾದ ದನಿಯಲ್ಲಿ ``ನಿಮ್ಮ ಭಂತೇಜಿ ಮನೆಬಿಟ್ಟು ಯಾವುದೋ ದೇಶಕ್ಕೆ ಬುದ್ಧನ್ನ ಹುಡಕ್ಕೊಂಡು ಹೋಗಿದಾರೆ. ಅವರು ಬಂದ್ಮೇಲೆ ಹೊರಗಡೆ ಎಲ್ಲಾದರೂ ಕುಂತು ಮಾತಾಡಿಕೊಳ್ಳಿ ಸಾ. ಈ ಮನೇಲಿ ಅವರ ಸುದ್ದಿ ಮಾತ್ರ ತಗೀಬೇಡಿ. ಬುದ್ಧನ ವಿಷಯ ಎತ್ತಬೇಡಿ. ದಯವಿಟ್ಟು ಹೊರಟುಹೋಗಿ' ಎಂದು ಹೇಳಿದರು. ನಮಗೆ ಎದೆಗೆ ಒದ್ದಂತಾಯಿತು. ಸೂಕ್ಷ್ಮಮನಸ್ಸಿನ ಡಾ.ಸಂಜೀವ್ ಗಾಬರಿಯಿಂದ ``ಗೋವಿಂದಯ್ಯ, ಕಮಾನ್, ಲೆಟಸ್ ಗೋಬ್ಯಾಕ್' ಎಂದರು. ಆದರೆ ಗೋವಿಂದಯ್ಯನವರು ಅದನ್ನು ಕಿವಿಗೆ ಹಾಕಿಕೊಳ್ಳದೆ ``ಮೇಡಂ, ಬೇಜಾರ್ ಮಾಡಕೋಬೇಡಿ. ನಿಮ್ಮ ಯಜಮಾನರು ಇಲ್ಲದೇ ಹೋದರೆ ಏನಂತೆ? ನೀವಿದ್ದೀರಲ್ಲ. ನಿಮ್ಮ ಜೊತೇಲೆ ಮಾತಾಡ್ತೀವಿ. ಈ ಬೌದ್ಧಧರ್ಮದಿಂದ ನಿಮಗೆ ಏನು ಕಷ್ಟವಾಗಿದೆ. ಅದನಾರೂ ಒಸಿ ಹೇಳಿ. ತಿಳಕೊಳ್ಳುವ'' ಎಂದು ನಮ್ರವಾಗಿ ಹೇಳಿದರು. ಆ ಮಹಿಳೆಯ ಕ್ಯಾಣ ಇಳಿದಿರಲಿಲ್ಲ. ``ಇಲ್ಲ ಸಾ, ನೀವು ಕೇಳೋದು ಬ್ಯಾಡ. ನಾನು ಹೇಳೋದೂ ಬ್ಯಾಡ. ಬುದ್ಧನ ಹೆಸರು ಹೇಳಿಕೊಂಡು ಬರೋ ಯಾರ ಹತ್ರಾನೂ ನಂಗೆ ಮಾತಾಡೋಕೆ ಇಷ್ಟವಿಲ್ಲ' ಎಂದರು. ಅದಕ್ಕೆ ಗೋವಿಂದಯ್ಯ ``ಅಮ್ಮಾ, ನನ್ನ ಜತೆ ದೂರದಿಂದ ಬಂದಿರೊ ವಿದ್ವಾಂಸರು ಲೇಖಕರು ಅವರೆ. ಒಂದೈದು ನಿಮಿಷ ನಿಮ್ಮ ಜೊತೆ ಮಾತಾಡ್ತೀವಿ'' ಎಂದು ವಿನಂತಿಸಿದರು. ಫಾಯದೆಯಾಗಲಿಲ್ಲ. ``ನಿಮ್ಮ ಲೇಖಕರನ್ನ ವಿದ್ವಾಂಸರನ್ನ ಕಟ್ಕೊಂಡು ನನಗೇನು ಆಗಬೇಕಿದೆಯಪ್ಪ? ಆ ಬುದ್ಧನಿಂದ ನನ್ನ ಸಂಸಾರವೇ ಹಾಳಾಗಿದೆ. ನಮ್ಮ ಪಾಡಿಗೆ ಬದುಕಲು ನಮಗೆ ಬಿಡಿ. ಈಗ ತಾವು ದಯಮಾಡಿ'' ಎಂದು ತಣ್ಣಗೆ ಆದರೆ ಆಕ್ರೋಶದಿಂದ ಹೇಳಿದರು. ಈಗ ಸಂಜೀವ್ ಗೆ ತಡೆಯಲು ಆಗಲಿಲ್ಲ. ``ತರಿಕೇರಿ, ಏನ್ರೀ ಇದು? ಆ ಹೆಣಮಗಳು ಇಂಡೈರಕ್ಟಾಗಿ ನಮಗ ಗೆಟ್ ಔಟ್ ಅಂತಿದಾರ. ಆದರೂ ನಾವು ಮಾತಾಡ್ತೀವಿ ಅನಲಿಕ್ಕೆ ಹತ್ತಿದೀವಿ. ಅವರಿಗ ತ್ರಾಸ ಕೊಡಬಾರದು. ಗೋವಿಂದಯ್ಯ. ಪ್ಲೀಸ್ ಕಂಬ್ಯಾಕ್'' ಎಂದು ಚಡಪಡಿಸಿದರು. ಆದರೆ ಗೋವಿಂದಯ್ಯ ಬರಲಿಲ್ಲ. ಛಲ ಬಿಡದ ತಿವಿಕ್ರಮನಂತೆ ಆಕೆಯನ್ನು ಒಲಿಸುತ್ತ  ``ಆಯ್ತು ಮೇಡಂ, ನೀವು ನಮ್ಮ ಜೊತ ಮಾತಾಡ್ದೆ ಇದ್ದರೂ ಪರವಾಯಿಲ್ಲ. ಒಂದು ಲೋಟ ನೀರಾದರೂ ಕೊಡಿ ಮತ್ತ'' ಎಂದರು. ನಾನು ಬೈಸಿಕೊಂಡಾದರೂ ಸರಿ, ಈ ಸೋದರಿಯ ಅಳಲಿನ ಮರ್ಮವೇನೆಂದು ಅರಿತೇ ಹೋಗಬೇಕೆಂದು ಭಂಡನಾಗಿ ನಿಂತಿದ್ದೆ. 


ನಮ್ಮ ಗದ್ದಲಕ್ಕೆ ಬೀದಿಯ ಕೆಲವು ಕಿಟಕಿ ಮತ್ತು ಬಾಗಿಲು ಮೆಲ್ಲಗೆ ತೆರೆದುಕೊಂಡು ಗೋಣುಗಳು ಹೊರಚಾಚಿಕೊಂಡವು. ಕೆಲವರು ಸೆಕೆಗೆಂಬಂತೆ ಹೊರಬಂದು ಗಾಳಿ ಹಾಕಿಕೊಳ್ಳುತ್ತ ಅಂಗಳದಲ್ಲಿ ನಿಂತು ಮಸುಗು ಕತ್ತಲೆಯಲ್ಲಿ ನಮ್ಮತ್ತ ನೋಡತೊಡಗಿದರು. ಅಷ್ಟುಹೊತ್ತು ಹೊರಗೇ ನಿಲ್ಲಿಸಿ ಮಾತಾಡಿದ ಆ ಮಹಿಳೆ, ಗೋವಿಂದಯ್ಯನವರ ನೀರಬೇಡಿಕೆ ಈಡೇರಿಸಲು, ಒಳಗೆ ಹೋದರು. ಅದೇ ಹೊತ್ತಲ್ಲಿ ನಾವು ಒಳಗೆ ನುಸುಳಿಕೊಂಡೆವು. ಆಕೆ ಚೊಂಬಿನಲ್ಲಿ ತಂದ ನೀರನ್ನು ಒಂದು ಲೋಟಕ್ಕೆ ಬಗ್ಗಿಸಿ ಕೊಟ್ಟರು. ಅವರ ವಿಶ್ವಾಸ ಗಳಿಸಲು ಬಾಯಾರಿಕೆ ಇಲ್ಲದಿದ್ದರೂ ಕುಡಿದೆವು. ನಂತರ ತಮ್ಮ ದನಿಗೆ ರೋದನದ ಎಳೆ ಬೆರೆಸಿ, ಆಕೆ ತಮ್ಮ ಕಷ್ಟದ ಚರಿತ್ರೆಯ ಒಂದು ಸಣ್ಣ ಅಧ್ಯಾಯವನ್ನು ತೆಗೆದರು. ``ಸಾ, ನನ್ನ ಕಷ್ಟಾವ ಏನೂಂತ ಹೇಳಲಿ? ನಮ್ಮ ಮನೇವರು ದೀಕ್ಷ ತಕ್ಕಂಡ ಮೇಲ ಮನೆ ಪರಿಸ್ಥಿತಿಯೆ ಬದಲಾಗದೆ. ಅವರು ನಮ್ಮನ್ನ ಬೀದಿಪಾಲು ಮಾಡಿ ತಿರಗಾಟಕ್ಕೆ ಹೋಗವರೆ. ಮನೇನ ನಾನೊಬ್ಬಳೇ ಸಂಭಾಳಿಸಬೇಕು. ನೀ ಸತ್ತ್ಯಾ ಬದುಕಿದೆಯಾ ಅಂತ ಕೇಳಲ್ಲ. ಇರೋದೊಂದು ಈ ಕೂಸಿಗೆ ಏನು ಓದ್ತೀದಿಯಾ ಅಂತ ಕೇಳಕೂ ಅವರಿಗ ಪುರುಸೊತ್ತಿಲ್ಲ. ಯಾವಾಗಲೂ ಬುದ್ಧ ಧಮ್ಮ ದೀಕ್ಷೆ ಅಂತ ಓಡಾಡ್ತವರೆ. ನನ್ನ ಮೇಲೂ ಬುದ್ಧನ್ನ ಹೇರತಾ ಅವರೆ. ನನಗೆ ಅವರ ಬುದ್ಧಬೇಡ. ನನಗೆ ನನ್ನ ಮಂಟೆಸ್ವಾಮೀನೇ ಸಾಕು. ನನಗ ನನ್ನ ಮಾದೇಶ್ವರ ಬೇಕು. ನನಗೂ ನನ್ನದೇ ಧರ್ಮ ಇಲ್ಲವಾ? ನನಗೆ ಮನಶ್ಶಾಂತಿ ಕೊಡೋ ದೇವರ ಪೂಜೆ ಮಾಡುವ ಹಕ್ಕಿಲ್ಲವಾ? ನನಗೂ ಎಲ್ಲರ ಹಾಗೆ ಸಂಸಾರ ಮಾಡಬೇಕು ಅನ್ನೋ ಆಸೆಯಿಲ್ಲವಾ?'' ಎಂದು ಆವೇಶದಿಂದ ಮಾತಾಡತೊಡಗಿದರು. ಅವರಿಗೆ ಅರಿಯದಂತೆ ಕಣ್ಣಲ್ಲಿ ನೀರು ದಳದಳ ಇಳಿಯತೊಡಗಿತು.

ಯಾಕೊ ನನಗೆ ಬುದ್ಧನು ಹೇಳದೆ ಬಿಟ್ಟುಹೋದ ಬಳಿಕ ಶೋಕಿಸಿರಬಹುದಾದ ಯಶೋಧರೆಯ ನೆನಪಾಯಿತು. ಈ ಯಶೋಧರೆಗೆ ಹೊಸ ಧಮ್ಮವು ತನ್ನಿಂದ ತನ್ನ ಗಂಡನನ್ನೂ ತನ್ನ ಮಗುವಿನಿಂದ ಅದರ ತಂದೆಯನ್ನೂ ಕಿತ್ತುಕೊಂಡಿದೆ, ಪರಂಪರೆಯಿಂದ ಬಂದ ದೈವಗಳ ಸಂಬಂಧವನ್ನೂ ಅದು ಕಿತ್ತುಕೊಳ್ಳುತ್ತಿದೆ ಎಂಬ ನೋವಿತ್ತು. ಬಹುಶಃ ಇಸ್ಲಾಮೊ ಕ್ರೈಸ್ತವೊ ಎಲ್ಲ ಹೊಸ ಧರ್ಮಗಳ ಸ್ವೀಕಾರದ ಮೊದಲ ಘಟ್ಟದಲ್ಲಿ ಇಂತಹದೊಂದು ಮಾನಸಿಕ ಭಗ್ನತೆ, ಕೌಟುಂಬಿಕ ಛಿದ್ರತೆ ಸಂಭವಿಸುತ್ತದೆ ಎಂದು ಕಾಣುತ್ತದೆ. ಶರಣ ಧರ್ಮವೂ ಈ ಭಗ್ನತೆಯನ್ನು ಅನುಭವಿಸಿತ್ತು. ಇದನ್ನು ಬಸವಣ್ಣನ ವಚನವೊಂದು ಸೂಚಿಸುತ್ತದೆ: ``ಗಂಡ ಶಿವಭಕ್ತ, ಹೆಂಡತಿ ಮಾರಿಮಸಣಿಯ ಭಕ್ತೆ; ಗಂಡ ಕೊಂಬುದು ಪಾದೋದಕ ಪ್ರಸಾದ, ಹೆಂಡತಿ ಕೊಂಬುದು ಸುರೆಮಾಂಸ''; ಸಾಮಾಜಿಕ ಮುಂಚಲನೆಯನ್ನು ನೀಡುವ ಧರ್ಮಗಳನ್ನು ಸಾಮಾನ್ಯವಾಗಿ ಮೊದಲು ಸ್ವೀಕರಿಸುವವರು ಗಂಡಸರೇ ಯಾಕಾಗಿರುತ್ತಾರೆಯೊ? `ಮಲೆಗಳಲ್ಲಿಮದುಮಗಳ'ಲ್ಲೂ ದೇವಯ್ಯನೇ ಕ್ರಿಸ್ತನಾಗಲು ಹೊರಟು ಮನೆ ಪ್ರಕ್ಷುಬ್ಧವಾಗುತ್ತದೆ. ಗಂಡುಮುಖ್ಯವಾಗಿರುವ ನಮ್ಮ ಸಮಾಜದಲ್ಲಿ ನಿರ್ವಾಹವಿಲ್ಲದೆ ಅವರ ಹಿಂದೆ ಮಹಿಳೆಯರು ಹಿಂಬಾಲಿಸಬೇಕು ಇಲ್ಲವೇ ಪ್ರತಿರೋಧ ತೋರಬೇಕು. ಪುರುಷರ ಈ ಏಕಪಕ್ಷೀಯ ನಡತೆ ಧರ್ಮದ ವಿಷಯದಲ್ಲಿ ಮಾತ್ರವಲ್ಲ, ಎಲ್ಲ ಹೊಸ ಆಚರಣೆಗಳ ಸಂದರ್ಭದಲ್ಲೂ ಸಂಭವಿಸುತ್ತದೆ. ಸಸ್ಯಾಹಾರದ ಹಿನ್ನೆಲೆಯಿಂದ ಬಂದ ಮೇಲ್ಜಾತಿ ಗಂಡಸರು, ಮಾಂಸಾಹಾರದ ಅಭ್ಯಾಸ ಮಾಡಿಕೊಂಡ ಬಳಿಕ, ತಮ್ಮ ಹೊಸ ಆಹಾರಪದ್ಧತಿಗೆ ನೈತಿಕ ಸಮರ್ಥನೆ ಒದಗಿಸಿಕೊಳ್ಳಲೆಂದು ಅದನ್ನು ಮಡದಿಯರ ಮೇಲೂ ಹೇರುವುದುಂಟು; ಇದಕ್ಕೆ ಪ್ರತಿಯಾಗಿ, ಮೇಲ್ಜಾತಿಯ ಹುಡುಗಿಯನ್ನು ಕಟ್ಟಿಕೊಂಡ ದಲಿತರು ಮಡದಿಗಾಗಿ ಮಾಂಸಾಹಾರ ಬಿಟ್ಟಿರುವ ನಿದರ್ಶನಗಳೂ ಉಂಟು. ಆದರೆ ಇಂತಹ ನಿದರ್ಶನಗಳು ಕಡಿಮೆ.
ಆಹಾರ ಧರ್ಮ ಉಡುಗೆ ಇವುಗಳ ವಿಷಯದಲ್ಲಿ ಏಕಪಕ್ಷೀಯವಾದ ಒತ್ತಾಯವು ವಿಚಿತ್ರ ಪ್ರತಿರೋಧಗಳನ್ನು ಹುಟ್ಟಿಸುತ್ತದೆ. ಸದಾಶಯವಿದ್ದರೂ, ಅದನ್ನು  ಜಾರಿ ತರುವ  ವಿಧಾನವು ಅಸೂಕ್ಷ್ಮವಾಗಿದ್ದರೆ ವ್ಯತಿರಿಕ್ತ ಪರಿಣಾಮಗಳನ್ನೇ ತರುತ್ತದೆ. ಆದರೂ ಸಾಮಾನ್ಯವಾಗಿ  ಮಹಿಳೆಯರು ಗಂಡ ಸ್ವೀಕರಿಸಿದ ಧರ್ಮವನ್ನು ಕುರುಡಾಗಿ ಅನುಸರಿಸಲು ಒಪ್ಪದೆ, ತಮ್ಮ ಪಾರಂಪರಿಕ ದೈವ ಧರ್ಮಗಳನ್ನು ಉಳಿಸಿಕೊಂಡಿರುವ ನಿದರ್ಶನಗಳುಂಟು. ಅಕಬರನನ್ನು ವರಿಸಿದರೂ ಜೋಧಾಬಾಯಿ ತನ್ನ ಧಾರ್ಮಿಕತೆಯನ್ನು ಬದಲಿಸಿಕೊಳ್ಳಲಿಲ್ಲ. ರಾಮಾನುಜರ ಪ್ರೇರಣೆಯಿಂದ ಶ್ರೀವೈಷ್ಣವ ಧರ್ಮವನ್ನು ಹೊಯ್ಸಳದೊರೆ ಬಿಟ್ಟಿದೇವನು ಸ್ವೀಕರಿಸಿದರೂ, ಮಡದಿ ಶಾಂತಲೆ ಶೈವಧರ್ಮದಲ್ಲೇ ಮುಂದುವರೆದಳು. ಜೈನಧರ್ಮದಲ್ಲೂ ಹೀಗೆ ಆಯಿತು. ಜೈನನಾದ ಗಂಡ ಜೈನನಾಗದ ಮಡದಿ ಇರುವ ಕುಟುಂಬಗಳ ಬಗ್ಗೆ ಕವಿ ಧರ್ಮಶಿವ ತನ್ನ `ಸಮಯ ಪರೀಕ್ಷೆ'ಯಲ್ಲಿ ಅಸಹನೆಯಿಂದ ಪ್ರಸ್ತಾಪ ಮಾಡುತ್ತಾನೆ. ಲಂಕೇಶರ `ಸಂಕ್ರಾಂತಿ' ನಾಟಕದಲ್ಲಿ ಲಿಂಗದೀಕ್ಷೆ ಸ್ವೀಕರಿಸಿ ಬದಲಾಗಿರುವ ತನ್ನ ಪ್ರಿಯಕರನ್ನು ತಿರಸ್ಕರಿಸುವ ಹೆಣ್ಣಿನ ಪಾತ್ರವೂ; ಕುಲಧರ್ಮವನ್ನು ಬಿಟ್ಟು ಶಿಷ್ಟಧರ್ಮವನ್ನು ಸೇರಿದ ಮಗನನ್ನು ಒಪ್ಪದ ತಂದೆಯ ಪಾತ್ರವೂ ಇದೆ. ಈ ಪಾತ್ರಗಳ ಮೂಲಕ ಸಾಮಾಜಿಕವಾಗಿ ಕ್ರಾಂತಿಕಾರಕವಾದ ಧರ್ಮವು ತನ್ನ ಜಾರಿಯಾಗುವಿಕೆಯಲ್ಲಿ ಮಾಡುತ್ತಿರುವ ವ್ಯಕ್ತಿಗತ ಭಾವನೆಗಳ ಘಾಸಿಯನ್ನು ಚಿತ್ರಿಸುತ್ತದೆ. ನಾಟಕದ ಮಹತ್ವವಿರುವುದು ಅದರ ಕಲಾತ್ಮಕ ಯಶಸ್ಸಿನಲ್ಲಿ ಮಾತ್ರವಲ್ಲ; ಇಂತಹ ಸಾಂಸ್ಕೃತಿಕ ಸಂಕಟಗಳನ್ನು ಪರಿಭಾವಿಸಿರುವುದರಲ್ಲಿ ಕೂಡ.
ಹೊಸಧರ್ಮಗಳ ಸ್ವೀಕಾರವು ಅಸಮಾನತೆಯುಳ್ಳ ಸಮಾಜದಲ್ಲಿ ವ್ಯಕ್ತಿಯ ವೈಯಕ್ತಿಕ ಬೇಕುಬೇಡಗಳಿಗೆ ಮಾತ್ರ ಸಂಬಂಧಿಸಿದ್ದಲ್ಲ. ಅದು ದಮನಿತ ಸಮುದಾಯಗಳಿಗೆ ಸಾಮಾಜಿಕ ಚಲನಶೀಲತೆಯನ್ನು ಕೊಟ್ಟಿದೆ; ಆಧ್ಯಾತ್ಮಿಕ ಸಮಾನತೆಯ ಹಂಬಲವನ್ನು ಈಡೇರಿಸುವ ಮಾಧ್ಯಮವಾಗಿದೆ. ಆದರೂ ಹೊಸಧರ್ಮವನ್ನು ಒಳಗೆ ಬಿಟ್ಟುಕೊಳ್ಳುವಲ್ಲಿ ಮಹಿಳೆಯರು ಮತ್ತು ವಯಸ್ಸಾದ ಜನ ಯಾಕೆ ಹಿಂಜರಿಕೆ ತೋರುತ್ತಾರೆ? ಹಳೆಯ ಧರ್ಮವನ್ನು ಬಿಟ್ಟುಕೊಡಲಾಗದ ಜಿಗುಟುತನ ಪ್ರದರ್ಶಿಸುತ್ತಾರೆ? ಅಥವಾ `ಸತಿಪತಿಗಳೊಂದಾದ ಭಕ್ತಿ ಹಿತವಪ್ಪುದು' ಎಂಬಲ್ಲಿರುವ ಅಪೇಕ್ಷೆಯೇ ತಪ್ಪಾಗಿದೆಯೊ?
ಹೊಸಧರ್ಮವು ಜನರ ದೈವಪದ್ಧತಿಯನ್ನು ಮಾತ್ರವಲ್ಲ ಉಡುವ ಉಣ್ಣುವ ಪದ್ಧತಿಯನ್ನು ಬದಲಾಯಿಸುತ್ತದೆ; ಆಲೋಚನ ವಿಧಾನವನ್ನು ಬದಲಿಸುತ್ತದೆ. ಮೊದಲ ಹಂತದಲ್ಲಿ ಅದು ಸಮುದಾಯದ ಜತೆ ವ್ಯಕ್ತಿಗೆ ಇರುವ ಸಾವಯವ ಆಪ್ತ ಸಂಬಂಧವನ್ನು ಭಗ್ನಗೊಳಿಸುತ್ತದೆ; ವೈಚಾರಿಕ ಪ್ರಜ್ಞೆಯುಳ್ಳ ಗಂಡಸರು ಈ ಬಗೆಯ ಸಂಬಂಧ ನಷ್ಟವನ್ನು ಕೆಲಮಟ್ಟಿಗೆ ಸಹಿಸಬಲ್ಲರು. ಸಾರ್ವಜನಿಕ ಬದುಕಿನಲ್ಲಿರುವ ಅವರಿಗೆ ಪರ್ಯಾಯ ಸಂಬಂಧಗಳು ಸೃಷ್ಟಿಯಾಗುವ ಕಾರಣ, ಇದು ಅಷ್ಟು ದೊಡ್ಡ ಸಮಸ್ಯೆಯೆನಿಸುವುದಿಲ್ಲ. ಆದರೆ ಮನೆ ಮತ್ತು ಕೇರಿಗಳ ಪುಟ್ಟಜಗತ್ತಿನಲ್ಲೇ ಹೆಚ್ಚು ಸಮಯ ಕಳೆಯುವ ಅಷ್ಟೊಂದು ವೈಚಾರಿಕ ಸಿದ್ಧತೆಯಿಲ್ಲದ ಮಹಿಳೆಯರಿಗೆ, ಹೀಗೆ ಸಂಬಂಧ ಕಡಿದುಕೊಂಡು ಬದುಕುವುದು ಕಷ್ಟವಾಗುತ್ತದೆ. ಅದರಲ್ಲೂ ತಾವು ನಂಬಿದ ದೈವವನ್ನು ಕೈಬಿಡಲು ಏನು ಕೇಡಾಗುತ್ತದೆಯೊ ಎಂದು ಮನಸ್ಸು ಅಳುಕುತ್ತದೆ.
ಹಾಗೆಂದು ಮಹಿಳೆಯರು ಹೊಸಧರ್ಮ ಹೊಸದೈವಗಳ ವಿರೋಧಿಗಳಲ್ಲ. ಅವರ ಧಾರ್ಮಿಕ ಉದಾರತೆಗೆ ಮುಸ್ಲಿಮರಲ್ಲದ ಮಹಿಳೆಯರು ದರ್ಗಾ ಮತ್ತು ಮೊಹರಂ ಆಚರಣೆಗಳಲ್ಲಿ ತೊಡಗಿರುವುದು ಅಥವಾ ಗ್ರಾಮೀಣ ಮುಸ್ಲಿಂ ಮಹಿಳೆಯರು ಸ್ಥಳೀಯ ಸಂಪ್ರದಾಯಗಳನ್ನು ಅನುಸರಿಸುವುದು ಸಾಕ್ಷಿ. ಅವರು `ಅನ್ಯ' ದೈವಗಳನ್ನು ಹಳತರ ಜತೆಗೇ ಸ್ವೀಕರಿಸಿಯಾರು; ಆದರೆ ಹಳೆಯವನ್ನು ಪೂರಾ ಕೈಬಿಟ್ಟು ಸ್ವೀಕರಿಸಬೇಕೆಂದಾಗ, ಹೊಸಧರ್ಮವು ತಮ್ಮ ನಂಬಿಕೆಯ ಬೇರುಗಳನ್ನು ಅಲುಗಿಸಿದಾಗ, ಅವರಿಗೆ ಕಷ್ಟವಾಗುತ್ತದೆ.
ಧಮ್ಮದೀಕ್ಷೆಯಿಂದ ಬಂಧುಗಳ ಸಾಮಾಜಿಕ ಸಂಬಂಧ ಮತ್ತು ಧಾರ್ಮಿಕ ನಂಬಿಕೆಗಳಲ್ಲಿ ಹುಟ್ಟುವ ಬಿರುಕುಗಳನ್ನು ನಿರ್ವಹಿಸುವ ಬೇಕಾದ ಸಾಮಾಜಿಕ ಮತ್ತು ಮಾನಸಿಕ ಮೆಕ್ಯಾನಿಸಂ ಕರ್ನಾಟಕದಲ್ಲಿನ್ನೂ ರೂಪುಗೊಂಡಂತೆ ಕಾಣುವುದಿಲ್ಲ. ಯಾಕೆಂದರೆ, ಮಹಿಳೆಯರು ಮೊದಲಿಗರಾಗಿ ಹೊಸಧಮ್ಮ ಸ್ವೀಕರಿಸಿ, ಅದನ್ನು ತಮ್ಮ ಪುರುಷರು ಅನುಸರಿಸುವಂತೆ ಮಾಡಿರುವ ನಿದರ್ಶನವೇ ನಮಗೆ ಸಿಗಲಿಲ್ಲ. ಆದರೆ ದೀಕ್ಷೆತೆಗೆದುಕೊಂಡ ಪುರುಷರು, ತಮ್ಮಂತೆ ಉಳಿದವರೂ ಧಮ್ಮವನ್ನು ಒಪ್ಪಿಕೊಳ್ಳಬೇಕು ಎಂಬ ಒತ್ತಾಯ ಮಾಡುತ್ತಿರುವುದು ಕಂಡಿತು. ಈ ಒತ್ತಾಯದ ಹಿಂದೆ ಅವರು ಪುರುಷರಾಗಿರುವ, ಯುವಕರಾಗಿರುವ, ನೌಕರಸ್ತರಾಗಿರುವ, ಅಕ್ಷರಸ್ತರಾಗಿರುವ, ಪ್ರಜ್ಞಾವಂತರಾಗಿರುವ ಇಗೊಗಳು ಕೆಲಸ ಮಾಡುತ್ತಿದ್ದವು. ಈ ಇಗೊಗಳು ಪರೋಕ್ಷವಾಗಿ ಉಳಿದವರಲ್ಲಿ ಬೌದ್ಧದ್ವೇಷವನ್ನು ಹುಟ್ಟಿಸಿದಂತಿದ್ದವು. ಅದರಲ್ಲೂ ಧಮ್ಮಕ್ಕೆ ಬಾರದ ಹಿರಿಯ ತಲೆಮಾರಿನವರು ಧಮ್ಮವಂತರಾಗಿರುವ ಮಕ್ಕಳಿಂದ ದೂರವಾಗಿ ಹೊಸ ಅಸ್ಪೃಶ್ಯತೆ ಮತ್ತು ಅನಾಥಪ್ರಜ್ಞೆ ಅನುಭವಿಸುತ್ತಿರುವರೆಂದೂ, ಧಮ್ಮ ಸ್ವೀಕರಿಸಿರುವ ತಲೆಮಾರು ಸ್ವೀಕರಿಸಿದವರ ಜತೆ ಸಹನೆಯಿಂದ ಒಡನಾಟ ಮಾಡುತ್ತಿಲ್ಲವೆಂದೂ ತೋರಿತು.
ಈ ಬಗೆಯ ಸಾಮಾಜಿಕ ಮಾನವೀಯ ಸಂಬಂಧಗಳ ಬಿರುಕು ಕೇವಲ ಕುಟುಂಬಗಳ ಒಳಗೆ ಮಾತ್ರವಲ್ಲ, ಹೊಸಧರ್ಮ ಸ್ವೀಕಾರ ಮಾಡಿದ ಕುಟುಂಬದ ಜತೆ, ಹಾಗೆ ಸ್ವೀಕಾರ ಮಾಡದೆ ಉಳಿದಿರುವ ಸಮುದಾಯದ ನಡುವೆ ಕೂಡ ಕಾಣಿಸಿತು. ಈಗಾಗಲೇ ಆಧುನಿಕ ತಲೆಮಾರಿನವರ ಶಿಕ್ಷಣ, ಸರ್ಕಾರಿ ಉದ್ಯೋಗ, ನಗರವಾಸ ಮತ್ತು ಮಧ್ಯಮವರ್ಗಕ್ಕೆ ಏರುವಿಕೆಗಳು, ಅನಕ್ಷರಸ್ತ ಗ್ರಾಮೀಣ ಕೆಳವರ್ಗದ ದಲಿತರ ಜತೆಗೆ ಒಂದು ಸಣ್ಣಬಿರುಕನ್ನು ಹುಟ್ಟಿಸಿವೆ; ಈ ಬಿರುಕು ಹೊಸಧರ್ಮ ಸ್ವೀಕಾರದ ಜತೆಗೆ ಮತ್ತಷ್ಟು ಅಗಲವಾಗುತ್ತಿದೆ. ಅನೇಕ ಕಡೆ ಧಮ್ಮಸ್ವೀಕಾರ ಮಾಡಿರುವ ಶಿಷ್ಟ ದಲಿತರು, ಪಾರಂಪರಿಕ ಮತಗಳಲ್ಲೇ ಉಳಿದ ತಮ್ಮ ಬಂಧುಗಳ ಬಗ್ಗೆ ಅವರು ಅಜ್ಞಾನಿಗಳು ಎಂಬ ದನಿಯಲ್ಲಿ ಅನಾದರದಿಂದ ಮಾತಾಡುತ್ತಿದ್ದರು. ತಮ್ಮ ಹಿರೀಕರು ಮಾರಮ್ಮ ಊರಮ್ಮಗಳಿಗೆ ನಡೆದುಕೊಳ್ಳುವುದು, ಕೋಳಿ ಕೋಣ ಬಲಿಕೊಡುವುದು, ಮಾಂಸಾಹಾರ ಮದ್ಯಪಾನ ಮಾಡುವುದು ಇತ್ಯಾದಿಯನ್ನು ಅವರು ಅಸಹನೆಯಿಂದ ಕಾಣುತ್ತಿದ್ದರು. ಇದಕ್ಕೆ ತಕ್ಕಂತೆ ಕೆಲವು ದಲಿತ ಭಂತೆಗಳು ಮಾಂಸಾಹಾರ ಸೇವನೆ ಮತ್ತು ಕುಡಿತಗಳನ್ನು ಹೀನ ಆಚರಣೆಗಳೆಂದೂ ಅವನ್ನು ದಲಿತರು ಬಿಟ್ಟುಬಿಡಬೇಕೆಂದೂ ಪ್ರತಿಪಾದಿಸುತ್ತಿದ್ದರು.
ಧಮ್ಮಸ್ವೀಕಾರದಿಂದ ಹುಟ್ಟಿದ ಈ ಬಿರುಕು, ಹೈದರಾಬಾದ್ ಕರ್ನಾಟಕದ ಊರುಗಳಲ್ಲಿ ಇನ್ನೊಂದು ತೆರನಾಗಿ ಕೆಲಸಮಾಡುತ್ತಿತ್ತು. ಅಲ್ಲಿ ಧಮ್ಮದೀಕ್ಷೆಯನ್ನು ಕೇವಲ ಚಲುವಾದಿಗಳು (ಬಲಗೈ ಹೊಲೆಯರು)  ಮಾಡಿದ್ದರು. ಧಮ್ಮದೀಕ್ಷೆ ಸ್ವೀಕರಿಸಿದ ಬಳಿಕ ಮಲ್ಲಿಕಾರ್ಜುನ ಖರ್ಗೆಯವರು ಗುಲಬರ್ಗದಲ್ಲಿ ದೊಡ್ಡದೊಂದು ಬೌದ್ಧ ಚೈತ್ಯಾಲಯ ನಿರ್ಮಿಸಿದ್ದರು. ಬೀದರ್ ಗುಲಬರ್ಗ ಜಿಲ್ಲೆಗಳಲ್ಲಿ ಬಲಗೈಯವರು ಧಮ್ಮದೀಕ್ಷೆ ಪಡೆಯಲು, ಮಹಾರರೇ ಪ್ರಮುಖವಾಗಿರುವ ಮಹಾರಾಷ್ಟ್ರದ ರಿಪಬ್ಲಿಕನ್ ಪಾರ್ಟಿಯೂ ಒಂದು ಕಾರಣ. ಪಾರ್ಟಿಯು ಧಮ್ಮದೀಕ್ಷೆ ಪಡೆದ ಅಂಬೇಡ್ಕರ್ ಅವರನ್ನು ರಾಜಕೀಯ ಸಾಂಸ್ಕೃತಿಕ ನಾಯಕನೆಂದು ಭಾವಿಸಿತು. ಇದು ದಲಿತರ ಎಡಗೈ ಬಣವನ್ನು ಮತ್ತೊಂದು ಬಗೆಯಲ್ಲಿ ಸಂಘಟಿತವಾಗಲು ಪ್ರಚೋದಿಸಿತು. ಒಡೆದ ಬಣಗಳು ದಾಯಾದಿಗಳಂತೆ ಇದ್ದವು. ಬಲಗೈನವರು ಅಂಬೇಡ್ಕರ್ ಅವರನ್ನು ನಾಯಕರನ್ನಾಗಿಸಿಕೊಂಡು ಧಮ್ಮಸ್ವೀಕಾರ ಮಾಡಿದರೆ, ಎಡಗೈವರು ಜಗಜೀವನರಾಮರನ್ನು ನಾಯಕರಾಗಿಸಿಕೊಂಡು ಕ್ರೈಸ್ತಧರ್ಮದತ್ತ ಚಲಿಸಿದ್ದರು. ಹೀಗೆ ಕುಟುಂಬ, ಸಮುದಾಯ ಮತ್ತು ಕೇರಿಗಳ ನಡುವೆ ಧಮ್ಮವು ಬೇರೊಂದು ಬಗೆಯಲ್ಲಿ ಬಿರುಕಿಗೆ ಕಾರಣವಾದಂತೆ ತೋರಿತು.
ರಹಮತ್, ಅರುಣ್, ಕುಲಕರ್ಣಿ, ಗೋವಿಂದಯ್ಯಹೊಸಧರ್ಮಗಳು ಎಷ್ಟೇ ನಾಗರಿಕವಾಗಿರಲಿ, ದಮನಿತರಿಗೆ ಸಾಮಾಜಿಕ ಚಲನಶೀಲತೆ ಕೊಡುವಂತಹದ್ದಾಗಿರಲಿ, ಅವನ್ನು ಮಾನಸಿಕ ಸಿದ್ಧತೆಯಿಲ್ಲದ ಜನರ ಮೇಲೆ ಹೇರಿದಾಗ ಅವು ಹಿಂಸ್ರಕವಾಗಿ ರೂಪಾಂತರಗೊಳ್ಳುತ್ತವೆ. ಯಾವುದೇ ಕ್ರಾಂತಿಕಾರ ಸಿದ್ಧಾಂತವನ್ನು ಸಹ ಅತ್ಯವರಸರದಲ್ಲಿ ಉತ್ಸಾಹದಲ್ಲಿ ಹೇರಿಕೊಂಡಾಗ ಅನೇಕ ಮಾನವೀಯ ಸೂಕ್ಷ್ಮತೆಗಳು ಕಳೆದುಹೋಗಿಬಿಡುತ್ತವೆ. ಈಗಿನ ಮುಸ್ಲಿಮರಲ್ಲಿ ಬಹಳ ಪ್ರಭಾವಶಾಲಿಯಾಗಿರುವ ತಬ್ಲೀಕ್ ಎಂಬ ನವಇಸ್ಲಾಮಿಕ್ ಚಳುವಳಿಯಿಂದ ಸಾವಿರಾರು ಕುಟುಂಬಗಳಲ್ಲಿ ಸತಿಪತಿಗಳೊಂದಾಗದ ಭಕ್ತಿಯು ಏರ್ಪಟ್ಟು, ಮಾನವೀಯ ಸಂಬಂಧಗಳು ಕಂಗೆಟ್ಟಿವೆ. ಧರ್ಮಪ್ರಸಾರಕ್ಕೆ ತಮ್ಮನ್ನು ಬಿಟ್ಟು ತಿಂಗಳುಗಟ್ಟಲೆ ಹೋಗುವ, ಯಾವಾಗಲೂ ಮಸೀದಿಗಳಲ್ಲಿ ಬೀಡುಬಿಟ್ಟಿರುವ ಗಂಡಂದಿರ ವರ್ತನೆಯಿಂದ ಅನೇಕ ಮಹಿಳೆಯರು, ಖಿನ್ನತೆಯಿಂದ ನರಳುತ್ತಿದ್ದಾರೆ. ಕೆಲವರು, ದೇವರ ದಾರಿಯಲ್ಲಿ ಹೋದ ಗಂಡನನ್ನು ಬಿಟ್ಟು ಹೊಸಪುರುಷನನ್ನು ಹುಡುಕಿ ಹೋಗಿರುವುದೂ ಉಂಟು.
ಕರ್ನಾಟಕದಲ್ಲಿ ಸಾಮೂಹಿಕ ಧಮ್ಮದೀಕ್ಷೆ ನೀಡುವ ಕಾರ್ಯಕ್ರಮಗಳು ನಡೆಯುತ್ತಿವೆ. ಅದು ಕರ್ನಾಟಕ ಸಾಮಾಜಿಕ ಸಮೀಕರಣವನ್ನು ಬದಲಿಸುವಷ್ಟು ಶಕ್ತವೊ ಅಲ್ಲವೊ, ಅಸ್ಪೃಶ್ಯತೆಯ ಕಾಯಿಲೆಗೆ ಯಾವ ಬಗೆಯ ಮದ್ದೊ ಇನ್ನೂ ಸ್ಪಷ್ಟವಾಗಿಲ್ಲ. ಆದರೆ ಇದಕ್ಕಾಗಿ ಬೆಲೆ ತೆರುತ್ತಿರುವವರು ಮಾತ್ರ ಮಹಿಳೆಯರಾಗಿದ್ದಾರೆ. ಧಮ್ಮದೀಕ್ಷೆ ನೀಡುತ್ತಿರುವವರು ಈ ಸಾಂಸ್ಕೃತಿಕ  ಬಿಕ್ಕಟ್ಟುಗಳನ್ನು ಪರಿಭಾವಿಸಿದಂತಿಲ್ಲ. ಹೀಗಾಗಿ ನಾವು ಕಂಡ ಬಹುತೇಕ ಯಶೋಧರೆಯರಲ್ಲಿ ಬುದ್ಧನ ಬಗ್ಗೆ ಕೋಪವಿತ್ತು. ಇದಕ್ಕೆ ಕಾರಣವಾಗಿದ್ದು ಧಮ್ಮವಲ್ಲ. ಧಮ್ಮವನ್ನು ನೆಲೆಗೊಳಿಸುತ್ತಿರುವ ವಿಧಾನ. 
ನಮ್ಮ ಬೌದ್ಧಯಾನದಲ್ಲಿ ಅನೇಕ ದಲಿತ ಕುಟುಂಬಗಳಲ್ಲಿ ಧಮ್ಮಸ್ವೀಕಾರವು ಹೊಸ ಆತ್ಮಾಭಿಮಾನವನ್ನು ಹೊಸ ಬದುಕಿನ ಕ್ರಮವನ್ನು ತಂದಿತ್ತಿರುವ ಹಲವಾರು ನಿದರ್ಶನಗಳನ್ನು ನಾವು ಕಂಡೆವು. ಆದರೆ ಎಲ್ಲ ಬಗೆಯ ಪರಿವರ್ತನೆಗಳ ಹೊತ್ತಲ್ಲಿ ಪ್ರತಿರೋಧ ಹತಾಶೆ ಅಸಹಾಯಕತೆ ಕಂಡೆವು. ನಮಗೆ ಬೌದ್ಧಧರ್ಮಕ್ಕೆ ಸೇರಿದ ಶಾಸನ, ವಿಗ್ರಹ ಚೈತ್ಯಾಲಯಗಳು ಭಗ್ನಾವಸ್ಥೆಯಲ್ಲಿ ಇದ್ದುದು ಕಂಗೆಡಿಸಲಿಲ್ಲ; ಧಮ್ಮಸ್ವೀಕಾರದ ವಿಷಯವು ಮನುಷ್ಯರ ಮತ್ತು ಕುಟುಂಬಗಳ ನಡುವೆ ಭಗ್ನತೆ ಹತಾಶೆ ತಂದಿರುವುದು ಕಂಗೆಡಿಸಿತು. ಯಶೋಧರೆಯರ ಕಷ್ಟಗಳಿಗೆ ಕೊನೆಯಿಲ್ಲವೆನಿಸಿತು.
(ಚಿತ್ರಗಳು: ಲೇಖಕರವು)
sources http://www.kendasampige.com/print_article.php?id=3423

Monday, 25 April 2011

ಸಂತೋಷ್ ಹೆಗ್ಡೆ ತಿಳಿದುಕೊಳ್ಳಬೇಕಾದದ್ದು...

ಮಂಗಳವಾರ - ಏಪ್ರಿಲ್ -26-2011

ಹಿಂದೊಮ್ಮೆ ಲೋಕಾಯುಕ್ತಕ್ಕೆ ರಾಜೀನಾಮೆ ನೀಡುವ ಬೆದರಿಕೆಯೊಡ್ಡಿದ್ದ ಸಂತೋಷ್ ಹೆಗ್ಡೆ, ತಮ್ಮ ‘ತಂದೆಯ ಸಮಾನ’ರಾದ ಎಲ್.ಕೆ.ಅಡ್ವಾಣಿಯವರ ಮಾತನ್ನು ಗೌರವಿಸಿ ರಾಜೀನಾಮೆಯಿಂದ ಹಿಂದೆ ಸರಿದಿದ್ದರು. ಇದೀಗ, ಲೋಕಪಾಲ ಕರಡು ಸಮಿತಿಯ ಸದಸ್ಯ ಸ್ಥಾನಕ್ಕೆ ರಾಜೀನಾಮೆಯ ಬೆದರಿಕೆಯೊಡ್ಡಿ ಮತ್ತೆ ರಾಜಕಾರಣಿಗಳನ್ನು ನಡುಗಿಸಿ, ಬಳಿಕ ‘ತಂದೆಯ ಸಮಾನ’ರಾದ ಅಣ್ಣಾ ಹಝಾರೆಯವರ ಮಾತಿಗೆ ಮಣಿದು ರಾಜೀನಾಮೆಯಿಂದ ಹಿಂದೆ ಸರಿದಿದ್ದಾರೆ. ಒಟ್ಟಿನಲ್ಲಿ ಎಲ್ಲವೂ ‘ಸಂತೋಷ’ದಿಂದಲೇ ಮುಕ್ತಾಯವಾಗಿದೆ. ರಾಜಕಾರಣಿಗಳೂ ನಿಟ್ಟುಸಿರಿಟ್ಟಿದ್ದಾರೆ.

ಆದರೆ ಈ ಬಾರಿಯ ಸಂತೋಷ್ ಹೆಗ್ಡೆ ರಾಜೀನಾಮೆ ಪ್ರಹಸನ ಒಂದು ರೀತಿಯ ನಾಟಕೀಯತೆಯಿಂದ ಕೂಡಿದ್ದು, ಅಷ್ಟೇ ನಾಟಕೀಯವಾಗಿ ಅದು ಮುಕ್ತಾಯಗೊಂಡಿತು. ಸಂತೋಷ್ ಹೆಗ್ಡೆಯವರ ಕುರಿತಂತೆ ದಿಗ್ವಿಜಯ್ ಸಿಂಗ್ ನೀಡಿದ ಹೇಳಿಕೆಗೆ ಸಿಟ್ಟಾಗಿ ಅವರು ರಾಜೀನಾಮೆಗೆ ಮುಂದಾಗಿದ್ದರು. ಒಂದು ಸರಕಾರವನ್ನೇ ಪ್ರಶ್ನಿಸುವ ಅಧಿಕಾರವುಳ್ಳ ಸಂಸ್ಥೆಯೊಂದನ್ನು ರೂಪಿಸಲು ಈ ಲೋಕಪಾಲ ಕರಡು ಸಮಿತಿ ಹೊರಟಿದೆ. ಇಂತಹ ಸಂದರ್ಭದಲ್ಲಿ ಲೋಕಪಾಲದ ಕುರಿತಂತೆ ಈ ದೇಶದ ಎಲ್ಲ ಕ್ಷೇತ್ರಗಳ ಜನರು ತಮ್ಮ ತಮ್ಮ ಅಭಿಪ್ರಾಯಗಳನ್ನು ಮಂಡಿಸಲು ಸಂಪೂರ್ಣ ಅವಕಾಶವನ್ನು ಹೊಂದಿರಬೇಕು.

ಸಮಿತಿಯ ಸದಸ್ಯರ ಕುರಿತಂತೆ ಈ ದೇಶದ ಯಾರೂ ತುಟಿ ಪಿಟಿಕ್ ಎನ್ನಬಾರದು ಎಂಬ ಧೋರಣೆ ಸರ್ವಾಧಿಕಾರವಾಗುತ್ತದೆ. ಪ್ರಜಾಸತ್ತಾತ್ಮಕ ದೇಶದಲ್ಲಿ ಅದಕ್ಕೆ ಅವಕಾಶವಿಲ್ಲ. ದಿಗ್ವಿಜಯ್ ಸಿಂಗ್ ಭ್ರಷ್ಟ ರಾಜಕಾರಣಿಯಂತೂ ಅಲ್ಲವೇ ಅಲ್ಲ. ಸದಾ ನಿಷ್ಠುರ ಹೇಳಿಕೆಗೆ ಹೆಸರು ಮಾಡಿದವರು. ದೊಡ್ಡ ಧ್ವನಿಯಲ್ಲಿ ಮಾತನಾಡುವ ಮೂಲಕ ಕಾಂಗ್ರೆಸನ್ನು ಒಂದಿಷ್ಟು ಜೀವಂತವಾಗಿ ಇಟ್ಟವರು. ಇಂತಹ ನಾಯಕ ಲೋಕಪಾಲ ಸಮಿತಿಯ ಬಗ್ಗೆ, ಕಾಯಿದೆಯ ಬಗ್ಗೆ ಮಾತನಾಡಿದರೆ ಅಥವಾ ಹೇಳಿಕೆ ನೀಡಿದರೆ ಅದನ್ನು ಅಪರಾಧವೆಂಬ ರೀತಿಯಲ್ಲಿ ಸ್ವೀಕರಿಸುವುದು ಸಂತೋಷ್ ಹೆಗ್ಡೆಯವರಂತಹ ವ್ಯಕ್ತಿತ್ವಕ್ಕೆ ಒಪ್ಪುವುದಿಲ್ಲ. ಲೋಕಪಾಲ ಕರಡು ಸಮಿತಿಯಲ್ಲಿರುವುದೆಂದರೆ, ಎಲ್ಲ ಟೀಕೆಗಳನ್ನು ಆಹ್ವಾನಿಸಿಕೊಂಡಂತೆ.

ಪ್ರಜಾಸತ್ತಾತ್ಮಕ ದೇಶದಲ್ಲಿ ಟೀಕೆ, ಆರೋಪ ಇತ್ಯಾದಿಗಳಿಗೂ ಅದರದೇ ಆದ ಮಹತ್ತ್ವವಿದೆ. ಇದೇ ಸಂತೋಷ್ ಹೆಗ್ಡೆ ರಾಜಕಾರಣಿಗಳ ಕುರಿತಂತೆ ಎಷ್ಟೋ ಬಾರಿ ಹಗುರವಾಗಿ ಮಾತನಾಡಿದ್ದಾರೆ ಮತ್ತು ಬಹಿರಂಗ ವಾಗಿ ಟೀಕಿಸಿದ್ದಾರೆ. ಆದರೆ ಅವರಾರೂ ಸಂತೋಷ್ ಹೆಗ್ಡೆಯವರಂತೆ ಬಹಿರಂಗವಾಗಿ ಸಿಟ್ಟಾಗಿರಲಿಲ್ಲ. ಇದೀಗ ತನ್ನ ವಿರುದ್ಧ ಸಣ್ಣದೊಂದು ಹೇಳಿಕೆ ನೀಡಿದಾಕ್ಷಣ ಸಂತೋಷ್ ಹೆಗ್ಡೆ ಸಿಟ್ಟಾಗಿ ರಾಜೀನಾಮೆ ನೀಡಲು ಮುಂದಾಗುವುದು ಅವರು ನಿರ್ವಹಿಸು ತ್ತಿರುವ ಹುದ್ದೆಗೆ ಶೋಭಿಸುವುದಿಲ್ಲ. ಲೋಕಪಾಲ ಮಸೂದೆ ಭ್ರಷ್ಟ ರಾಜಕಾರಣಿಗಳು ಮತ್ತು ಅಧಿಕಾರಿಗಳನ್ನೇ ಗುರಿಯಾಗಿಸಿಕೊಂಡಿರುವು ದರಿಂದ ಟೀಕೆ, ಆರೋಪಗಳು ಸಹಜ. ಅದನ್ನು ಸಂತೋಷ್ ಹೆಗ್ಡೆ ನಿರೀಕ್ಷಿಸುತ್ತಿರಬೇಕು.

ಮುಂದಿನ ದಿನಗಳಲ್ಲಿ ಅವರು ಮತ್ತು ಅವರ ಸಂಗಡಿಗರ ಮೇಲೆ ಇನ್ನಷ್ಟು ಟೀಕೆಗಳು, ಆರೋಪಗಳು ಬರಬಹುದು. ಅದಕ್ಕೆ ಸಮರ್ಥ ಉತ್ತರ ನೀಡುವ ಮೂಲಕ ಎದುರಿಸಬೇಕು. ಬದಲಿಗೆ ತಮ್ಮ ವಿರುದ್ಧ ಯಾರೂ ಟೀಕೆಯನ್ನೇ ಮಾಡಬಾರದು ಎಂದರೆ ಅದು ಪ್ರಜಾಪ್ರಭುತ್ವ ವಿರೋಧಿಯಾಗುತ್ತದೆ.ಸಮಿತಿಯಲ್ಲಿ ದಲಿತ ಸದಸ್ಯನಿರಬೇಕು ಎನ್ನುವ ಒತ್ತಾಯವನ್ನೂ ಸಂತೋಷ್ ಹೆಗ್ಡೆ ಹಗುರವಾಗಿ ತೆಗೆದುಕೊಂಡಿದ್ದಾರೆ. ಭಾರತ ದೇಶದ ಸಂರಚನೆಯ ಕುರಿತಂತೆ ಆಳ ತಿಳುವಳಿಕೆಯಿ ರುವ ಯಾರೂ ಈ ಒತ್ತಾಯವನ್ನು ಹಗುರವಾಗಿ ತೆಗೆದುಕೊಳ್ಳಲಾರರು. ದಲಿತರು ಶತಶತಮಾನ ಗಳಿಂದ ಈ ದೇಶದಲ್ಲಿ ವಂಚನೆಗೊಳಗಾಗುತ್ತಾ ಬಂದವರು.

ಈ ದೇಶದ ಧಾರ್ಮಿಕ ಕಾನೂನನ್ನು ಮುಂದಿಟ್ಟು ಅವರನ್ನು ಬರ್ಬರವಾಗಿ ಶೋಷಣೆಗೊಳಪಡಿಸಲಾಯಿತು. ದೇಶ ಸ್ವತಂತ್ರಗೊಂಡ ಬಳಿಕ, ಈ ದೇಶದ ಸಂವಿಧಾನ ರಚನೆಯಾಯಿತು. ಒಂದು ವೇಳೆ, ಸಂವಿಧಾನ ರಚನೆಯ ಸಮಿತಿಯಲ್ಲಿ ದಲಿತ ನಾಯಕ ಅಂಬೇಡ್ಕರ್ ಇಲ್ಲದೇ ಇದ್ದಿದ್ದರೆ, ಸ್ವಾತಂತ್ರಪೂರ್ವದ ದಬ್ಬಾಳಿಕೆ ಮುಂದೆಯೂ ನಡೆಯುತ್ತಿತ್ತು. ದಲಿತ ಅಂಬೇಡ್ಕರ್ ಇದ್ದ ಕಾರಣಕ್ಕಾಗಿ ನಮ್ಮ ಸಂವಿಧಾನದ ಆಶಯ ಹೆಚ್ಚು ಮಾನವೀಯವಾಗಿದೆ ಮತ್ತು ಶೋಷಿತರಿಗೆ ಅನ್ಯಾಯವಾಗಬಾರದು ಎನ್ನುವ ಕಾಳಜಿಯನ್ನು ಹೊಂದಿದೆ. ಆದರೂ ಈ ದೇಶದಲ್ಲಿ ಕಾನೂನು, ಸಿಬಿಐಯಂತಹ ಸಂಸ್ಥೆಯನ್ನೇ ಬಳಸಿಕೊಂಡು ದಲಿತರು, ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯ ನಡೆಸಲು ಕೆಲವು ಬಾರಿ ಪ್ರಯತ್ನಿಸಿದೆ. ತನಿಖೆಯ ಹೆಸರಿನಲ್ಲಿ ಈ ಸಂಸ್ಥೆಗಳು ಗುಜರಾತ್‌ನಲ್ಲಿ ಮಾಡಿರುವ ಅನಾಹುತಗಳನ್ನೂ ನಾವು ನೋಡುತ್ತಿದ್ದೇವೆ.

ಪದೇ ಪದೇ ತಮಗಾಗಿರುವ ವಂಚನೆ, ಅನ್ಯಾಯದ ಹಿನ್ನೆಲೆಯಲ್ಲಿ ದಲಿತರು, ಲೋಕಪಾಲ ಮಸೂದೆಯ ಕರಡು ರಚನೆ ಸಮಿತಿಯಲ್ಲಿ ತಮ್ಮ ಸದಸ್ಯರೂ ಇರಬೇಕು ಎಂದು ಬಯಸುತ್ತಿದ್ದಾರೆ. ನಾಳೆ, ಈ ಲೋಕಪಾಲ ಮಸೂದೆ ಉಳ್ಳವರ, ಮೇಲ್ವರ್ಗದವರ ಮೂಗಿನ ನೇರಕ್ಕೆ ಇರಬಾರದು ಎನ್ನುವ ಕಾಳಜಿ ಇದರ ಹಿಂದಿದೆ. ಆದುದರಿಂದ ಅತ್ಯಗತ್ಯವಾಗಿ, ನೊಂದವರ ಪ್ರತಿನಿಧಿಗಳು ಈ ಸಮಿತಿಯಲ್ಲಿ ಇರಲೇ ಬೇಕಾಗಿದೆ. ಸಂತೋಷ್ ಹೆಗ್ಡೆಯವರ ಕೆಲಸ, ಪ್ರಾಮಾಣಿಕತೆಯ ಕುರಿತಂತೆ ಎಳ್ಳಷ್ಟೂ ಅನುಮಾನವಿಲ್ಲ. ಆದರೆ ಇಡೀ ಸಮಿತಿಯಲ್ಲಿ ಯಾರಿರಬೇಕು, ಯಾರಿರಬಾರದು ಎನ್ನುವುದನ್ನು ನಿಯಂತ್ರಿಸುವ, ನಿರ್ದೇಶಿಸುವ ಕೆಲಸಕ್ಕೆ ಹೆಗ್ಡೆಯವರಾಗಲಿ, ಹಝಾರೆ ಯವರಾಗಲಿ ಇಳಿಯಬಾರದು. ಹಾಗೆ ಇಳಿದುದೇ ಆದರೆ, ಇನ್ನಷ್ಟು ಅಸಮಾಧಾನಗಳನ್ನು ಹುಟ್ಟು ಹಾಕಲಿದೆ ಮಾತ್ರವಲ್ಲ ಅದರ ಅಂತಿಮ ಪರಿಣಾಮ ಲೋಕಪಾಲ ಮಸೂದೆಯ ಮೇಲೆಯೇ ಬೀಳಬಹುದು.

ಇಲ್ಲಿಯವರೆಗೆ ಲೋಕಪಾಲ ಮಸೂದೆ ಅನುಷ್ಠಾನಕ್ಕೆ ಬರದೆ ಇರುವುದಕ್ಕೆ ಭ್ರಷ್ಟ ರಾಜಕಾರಣಿಗಳು ಕಾರಣರಾಗಿದ್ದಾರೆ. ಇದೀಗ ಪ್ರಾಮಾಣಿಕರೆಂದು ಕರೆಸಿಕೊಂಡ ಸಮಾಜ ಸೇವಕರ ಸರ್ವಾಧಿಕಾರ, ಈಗೋಗಳು ಲೋಕಪಾಲ ಮಸೂದೆಯ ಮೇಲೆ ಪರಿಣಾಮವನ್ನು ಬೀರದೆ ಇರಲಿ. ಒಂದು ವೇಳೆ ಹಾಗಾದುದೇ ಆದಲ್ಲಿ, ಅದರ ಲಾಭವನ್ನು ಸಂಪೂರ್ಣ ತಮ್ಮದಾಗಿಸಿಕೊಳ್ಳುವವರು ಭ್ರಷ್ಟ ರಾಜಕಾರಣಿಗಳು ಎಂಬ ಎಚ್ಚರಿಕೆ ಈ ‘ಹೋರಾಟಗಾರ’ರಲ್ಲಿ ಇರಬೇಕು.

ಸಂಪಾದಕೀಯ

Saturday, 23 April 2011

ದಲಿತರ ಮೇಲೆ ಹಲ್ಲೆ: ಆರೋಪಿಗಳ ಬಂಧನಕ್ಕೆ ಆಗ್ರ


ಶನಿವಾರ - ಏಪ್ರಿಲ್ -23-2011

ಮಂಡ್ಯ, ಎ.22: ಮದ್ದೂರು ತಾಲೂಕು ಬುಜವಳ್ಳಿ ಗ್ರಾಮದಲ್ಲಿ ದಲಿತರ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿರುವ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಮುಖಂಡ ಎಂ.ಬಿ.ಶ್ರೀನಿವಾಸ್, ಜಿಲ್ಲಾ ಸಂಘಟನಾ ಸಂಚಾಲಕರಾದ ಎಂ.ವಿ.ಕೃಷ್ಣ, ಎಂ.ಟಿ.ತಿಮ್ಮಯ್ಯ, ಆರೋಪಿಗಳನ್ನು ಬಂಧಿಸಿ ಕಾನೂನು ಕ್ರಮ ಜರಗಿಸಲು ಆಗ್ರಹಿಸಿದ್ದಾರೆ.ಹಲ್ಲೆ ಆರೋಪಿಗಳ ವಿರುದ್ಧ ಕಾನೂನು ಕ್ರಮ ಜರಗಿಸಿ ಅವರ ಆಸ್ತಿ-ಪಾಸ್ತಿಯನ್ನು ಸರಕಾರ ಮುಟ್ಟುಗೋಲು ಹಾಕಿಕೊಳ್ಳಬೇಕು. ಹಲ್ಲೆಗೊಳದಾಗ ಕುಟುಂಬಕ್ಕೆ ತಲಾ 50 ಸಾವಿರ ರೂ.ಪರಿಹಾರ, ದಲಿತರಿಗೆ ರಕ್ಷಣೆ ನೀಡಬೇಕು. ತಪ್ಪಿದಲ್ಲಿ ನ್ಯಾಯ ಸಿಗುವವರೆಗೂ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ.

ಗ್ರಾಮದಲ್ಲಿ ಸುಮಾರು 40 ವರ್ಷದಿಂದ ವಾಸಿಸುತ್ತಿರುವ ಪರಿಶಿಷ್ಟ ಜನಾಂಗದ ಕುಟುಂಬಗಳನ್ನು ಒಕ್ಕಲೆಬ್ಬಿಸಲು ಈ ರೀತಿಯ ದೌರ್ಜನ್ಯ ಎಸಗಲಾಗಿದೆ ಎಂದು ಆರೋಪಿಸಿರುವ ಅವರು, ಪರಿಶಿಷ್ಟರನ್ನು ಒಕ್ಕಲೆಬ್ಬಿಸದೆ ಸದರಿ ಜಾಗವನ್ನು ಖಾಯಂಗೊಳಿಸಿ ಹಕ್ಕುಪತ್ರ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಪ್ರಜಾಪ್ರಭುತ್ವದ ಮೇಲಿನ ಹಲ್ಲೆ
ಜಿಲ್ಲಾ ಶೋಷಿತ ವರ್ಗಗಳ ಒಕ್ಕೂಟದ ಅಧ್ಯಕ್ಷ ಎಸ್.ಪುಟ್ಟಂಕಯ್ಯ ಹೇಳಿಕೆ ನೀಡಿದ್ದು, ಕೃತ್ಯವನ್ನು ಖಂಡಿಸಿದ್ದಾರೆ. ಇದು ಪ್ರಜಾಪ್ರಭುತ್ವದ ಮೇಲಿನ ಹಲ್ಲೆಯಾಗಿದೆ. 21ನೆ ಶತಮಾನದಲ್ಲೂ ಇಂತಹ ಹೀನ ಕೃತ್ಯ ನಡೆಯುತ್ತಿರುವುದಕ್ಕೆ ಅವರು ವಿಷಾದಿಸಿದ್ದು, ಆರೋಪಿಗಳ ಬಂಧನಕ್ಕೆ ಆಗ್ರಹಿಸಿದ್ದಾರೆ.

Sunday, 10 April 2011

ಗಾಂಧಿ, ಅಸ್ಪಶತೆ ಮತ್ತು ಸ್ವಾತಂತ್ರ್ಯೋತ್ತರ ಭಾರತದ ಸಂಕಟಗಳು (ಭಾಗ-1)


ಗುರುವಾರ - ಜನವರಿ -20-2011

"I am condemned because I criticized Gandhi and Jinnah for the mess they have made of Indian politics, and in doing so I am alleged to have shown towards them hatred and disrespect. In reply to this charge what I have to say is that I have been a critic and I must continue to be such ….. I dislike them I do not hate them – it is because I love India more." 

ಈ ಹೇಳಿಕೆಯನ್ನು ಅಂಬೇಡ್ಕರ್ ಬಿಡು ಗಡೆ ಮಾಡಿರುವುದು 1942ರಲ್ಲಿ. ರಾಷ್ಟ್ರ ರಾಜ ಕಾರಣದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡ ಗಾಂಧೀಜಿ ಮತ್ತು ಅವರು ಈ ದೇಶದ ಅಸ್ಪಶ್ಯ ಮತ್ತು ದುರ್ಬಲ ವರ್ಗದವರನ್ನು ಉದ್ದೇಶಿಸಿ ನಡೆಸುತ್ತಿರುವ ಹೋರಾಟವನ್ನು ಸೂಕ್ಷ್ಮವಾಗಿ ಗಮನಿಸಿದ ಅಂಬೇಡ್ಕರ್, ಆ ಕುರಿತು ತನ್ನ ನಿಲುವೇನು ಎಂಬುದನ್ನು ಮೇಲಿನ ಹೇಳಿಕೆಯಲ್ಲಿ ಬಹಿರಂಗಪಡಿಸುತ್ತಾರೆ. ಇದು ಈ ದೇಶದ ಮಿಲಿ ಯಗಟ್ಟಳೆ ಅಸ್ಪಶ್ಯರು ಹಾಗೂ ಜಾತಿ ವಿರೋಧಿ ಹೋರಾಟವನ್ನು ಬೆಂಬಲಿಸುವವರ ನಿಲುವು ಎಂದು ದೃಢೀಕರಿಸುತ್ತಾರೆ. ಜೊತೆಗೆ ಅವರ ಹೇಳಿಕೆಯಲ್ಲಿ ಗಾಂಧಿ ಮತ್ತು ಅಸ್ಪಶತೆ ನಡು ವಿನ ಸಂಬಂಧವು ಕೂಡ ವ್ಯಕ್ತವಾಗುತ್ತದೆ.
ಈ ಹಿನ್ನೆಲೆಯಲ್ಲಿ ಗ್ರಹಿಸುವುದಾದರೆ ಗಾಂಧೀ ರಾಜಕೀಯದ ವಿಚಾರವಾಗಿ ಪ್ರಕಟವಾಗುವ ದ್ವಂದ್ವಗಳ ಕುರಿತು ಅಂಬೇಡ್ಕರ್‌ರವರಿಗೆ ವೈ ಮನಸ್ಸು ಇದ್ದಿರುವುದು ಸ್ಪಷ್ಟವಾಗುತ್ತದೆ. ಗಾಂಧೀಜಿ ತಳೆದಿರುವ ನಿಲುವಿನಲ್ಲೆ ಈ ದ್ವಂದ್ವ ಬಹಿರಂಗಗೊಳ್ಳುತ್ತದೆ -ಒಂದು ಕಡೆ ಅವರು ಅಸ್ಪಶತೆ ಆಚರಣೆಯ ಕುರಿತು ತೀವ್ರವಾದ ಟೀಕೆಗಳನ್ನು ಮಾಡುತ್ತಾರೆ. ಇನ್ನೊಂದು ಕಡೆ ಯಲ್ಲಿ ಜಾತಿ ಮತ್ತು ವರ್ಣಾಶ್ರಮ ಧರ್ಮವನ್ನು ಪ್ರತಿಪಾದಿಸುತ್ತಾರೆ. ಇಲ್ಲಿ ಎರಡು ಪ್ರಮುಖ ವಿಷಯಗಳು ಪರಸ್ಪರ ಸಂಬಂಧ ಬೆಳೆಸಿಕೊಳ್ಳುತ್ತವೆ.
ಒಂದನೆಯದು ಜಾತಿ ಎಂಬ ಸಂಸ್ಥೆ ಅಥವಾ ವರ್ಣಾಶ್ರಮ ಧರ್ಮದ ಕುರಿತು ಗಾಂಧೀಜಿಗಿರುವ ಕಾಳಜಿ. ಎರಡನೆಯದು ಕಾಂಗ್ರೆಸ್‌ನೊಳಗೆ ಗುರುತಿಸಿಕೊಂಡ ಒಂದು ಬಲಿಷ್ಠ ಗುಂಪು ತನ್ನ ಇರುವಿಕೆಯನ್ನು ಪ್ರಕಟಿ ಸುತ್ತಾ ವಸಾಹತುಶಾಹಿ ವಿರೋಧಿ ಚಳವಳಿ ಯನ್ನು ಮುನ್ನಡೆಸುವ ನೆಪದಲ್ಲಿ ಜಾತಿ ವ್ಯವಸ್ಥೆ ಯನ್ನು ಪ್ರತಿಪಾದಿಸುತ್ತದೆ. ಈ ಗುಂಪನ್ನು ಬಾಲಗಂಗಾಧರ್ ತಿಲಕ್‌ರವರು ಪ್ರತಿನಿಧಿಸು ತ್ತಿದ್ದು, ಅವರಿಗೆ ಜಾತಿ ವ್ಯವಸ್ಥೆ ಎಂಬುದು ಧರ್ಮದೊಳಗಿನ ಒಂದು ಒಕ್ಕೂಟವಾಗಿ ಕಾಣು ತ್ತದೆ.
ತಿಲಕ್ ಆಲೋಚನೆ ಹೇಗಿತ್ತು ಅಂದರೆ, ಅವರ ಪ್ರಕಾರ ಒಬ್ಬ ವ್ಯಕ್ತಿ ಜಾತಿ ವ್ಯವಸ್ಥೆಯ ಹರಿಕಾರನಾದರೆ ಮಾತ್ರ ಅವನು ರಾಷ್ಟ್ರೀಯ ವಾದಿ ಆಗಲು ಅರ್ಹತೆ ಪಡೆಯುತ್ತಾನೆ ಎಂದು ಅಭಿಪ್ರಾಯಪಡುತ್ತಾರೆ. ಈ ಆಲೋಚನೆ ಯಿಂದಲೆ ತಿಲಕರು ಶಿಕ್ಷಣ ಸಂಸ್ಥೆಗಳಲ್ಲಿ ಬ್ರಾಹ್ಮ ಣೇತರ ಮತ್ತು ಅಸ್ಪಶ್ಯರ ಮಕ್ಕಳು ಸೇರ್ಪಡೆ ಗೊಳ್ಳಬಾರದೆಂದು ಹೇಳುತ್ತಾರೆ. ಗೋಖಲೆ ಯಂತ ಕಾಂಗ್ರೆಸಿಗರು ಬಾಂಬೆ ಪ್ರಸಿಡೆನ್ಸಿಯಲ್ಲಿ ಎಲ್ಲರಿಗೂ ಕಡ್ಡಾಯ ಶಿಕ್ಷಣ ಎಂಬ ನಿರ್ಣಯ ವನ್ನು ಹೊರಡಿಸ ಹೊರಟಾಗ ರಾಷ್ಟ್ರೀಯವಾದಿ ಗಳು ಮುಸ್ಲಿಂ ಲೀಗ್ ಜೊತೆ ಸೇರಿ ಆ ನಿರ್ಣ ಯಕ್ಕೆ ಒಪ್ಪಿಗೆ ಸೂಚಿಸದಂತೆ ರಾಜಕೀಯ ಮಾಡುತ್ತಾರೆ. ವಲ್ಲಭಬಾಯಿ ಪಟೇಲರು ಅಂತ ರ್‌ಜಾತಿ ವಿವಾಹ ಬಿಲ್‌ನ್ನು ಮಂಡಿಸಿದಾಗ, ತಿಲಕ್‌ರು ವಿರೋಧಿಸಿ ಒಂದು ವೇಳೆ ಈ ಬಿಲ್‌ನ್ನು ಒಪ್ಪಿಕೊಂಡರೆ, ಭಾರತೀಯ ಅಸ್ಮಿತೆಗೆ ಅವಮಾನವಾಗುತ್ತದೆ ಎಂದು ಹೇಳಿಕೆ ನೀಡಿದರು.
ಹಾಗೇನೆ, ಸುಧಾರಣಾವಾದಿಗಳಾದ ಮಹಾದೇವ್ ಗೋವಿಂದ ರಾನಡೆಯಂತವರು ಉದಾರತೆ, ಸಮಾನತೆಯನ್ನು ಪ್ರತಿಬಿಂಬಿಸುವ ಸಮಾಜ ನಿರ್ಮಾಣಕ್ಕೆ ಕರೆಕೊಟ್ಟು ಜಾತಿ, ಧರ್ಮದಂತಹ ಪೂರ್ವಗ್ರಹಗಳನ್ನು ತೊಡೆದು ಹಾಕಿ ಏಕತಾ ಭಾವನೆಯನ್ನು ಪ್ರತಿಪಾದಿಸಿದರೆ, ತಿಲಕರು ತೀವ್ರವಾಗಿ ವಿರೋಧಿಸಿದರು, ಈ ಬಗೆಯ ವಿರೋಧದ ಕುರಿತು ಅಂಬೇಡ್ಕರ್ ಹೀಗೆ ಪ್ರತಿಕ್ರಿಯಿಸುತ್ತಾರೆ.It is not possible for decency to enter into the abuses that were hurled, the calumnies that were uttered, and the strategies that were employed against the social reformers. ಹಾಗೇನೆ ಸಾಮಾಜಿಕ ಮೌಲ್ಯ ಮತ್ತು ನ್ಯಾಯದ ಕುರಿತು ದ್ವನಿ ಎತ್ತಿದ ರಾನಡೆ ಯವರ ಧೈರ್ಯವನ್ನು ಅಂಬೇಡ್ಕರ್ ಪ್ರಶಂಸಿಸುತ್ತಾರೆ.
ಅಂದರೆ 1920ರ ಹೊತ್ತಿಗೆ ಗಾಂಧೀಜಿ ರಾಷ್ಟ್ರ ರಾಜಕಾರಣಕ್ಕೆ ಪ್ರವೇಶ ಮಾಡುವ ಹೊತ್ತಿಗೆ ಕಾಂಗ್ರೆಸ್‌ನೊಳಗೆ ಜಾತಿಪರ ವಾದಿಸುವ ಒಂದು ಬಲಿಷ್ಠ ಗುಂಪು ದೊಡ್ಡ ಮಟ್ಟದಲ್ಲಿಯೇ ಸಂಘ ಟನೆಗೊಂಡಿತ್ತು. ಇದಕ್ಕೆ ಪೂರಕವಾಗಿ ಗಾಂಧೀಜಿ ಕೂಡ ಜಾತಿ ಎಂಬ ಸಂಸ್ಥೆಯ ಪರವಾಗಿದ್ದರು. 1917ರಲ್ಲಿ ಕಾಂಗ್ರೆಸ್ ಅಸ್ಪಶತೆಯನ್ನು ನಿರ್ಮೂ ಲನ ಮಾಡುವ ಒಂದು ಠರಾವನ್ನು ಹೊರಡಿ ಸಿತು. ಗಾಂಧೀ ಈ ಸಂದರ್ಭದಲ್ಲಿ ಒಂದು ಹೇಳಿಕೆ ನೀಡಿ ಅಸ್ಪಶತೆಯ ನಿರ್ಮೂಲನ ಎಂಬುದು ಸ್ವರಾಜ್ಯ ಪಡೆಯುವ ಪ್ರಕ್ರಿಯೆಗೆ ಪೂರಕವಾದುದು ಎಂದು ಆ ಹೇಳಿಕೆಯಲ್ಲಿ ಪರಿಭಾವಿಸುತ್ತಾರೆ.
ಆದರೆ, ವರ್ಣಾಶ್ರಮ ಧರ್ಮವನ್ನು ರಕ್ಷಣೆ ಮಾಡಬೇಕೆಂದು ಹೇಳುತ್ತಾರೆ. ಹಾಗೇನೆ, ಶ್ರೇಷ್ಠ ವರ್ಣವನ್ನು ಯಾವನೊಬ್ಬನೂ ಸ್ವೀಕರಿಸುವುದನ್ನು ವಿರೋಧಿಸುತ್ತಾರೆ. ಮದ್ರಾಸ್ ಲೆಜಿಸ್ಲೇಟಿವ್ ಅಸೆಂಬ್ಲಿ ಯಲ್ಲಿ ಟೆಂಪಲ್ ಎಂಟ್ರಿ ಬಿಲ್‌ನ್ನು ಮಂಡಿಸಿದಾಗ ಗಾಂಧೀಜಿ ಬೆಂಬಲಿಸುತ್ತಾರೆ. ಆದರೆ, ಕೇರಳದ ಗುರುವಾಯೂರಿನ ದೇವಾಲಯಕ್ಕೆ ಅಸ್ಪಶರ ಪ್ರವೇಶವನ್ನು ನಿರಾಕರಿಸಿದರೆ ತಾನು ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳುತ್ತೇನೆ ಎಂದು ಕೊಟ್ಟಿರುವ ಹೇಳಿಕೆಯನ್ನು ಗಾಂಧೀಜಿ ಮರೆಯುತ್ತಾರೆ. ಎಲ್ಲಿಯವರೆಗೆ ಅಂದರೆ 1933-34ರಲ್ಲಿ ರಂಗಾ ಅಯ್ಯರ್‌ರವರು ಅಸ್ಪಶತೆ ನಿರ್ಮೂಲನ ಬಿಲ್‌ನ್ನು ಸೆಂಟ್ರಲ್ ಲೆಜಿಸ್ಲೇಟಿವ್‌ನಲ್ಲಿ ಮಂಡಿಸಿದಾಗ ಗಾಂಧೀಜಿ ಕಟುವಾಗಿ ಖಂಡಿಸುತ್ತಾರೆ ಮತ್ತು ವಿರೋಧಿಸುತ್ತಾರೆ. ಅಂಬೇಡ್ಕರ್‌ಗೆ ಇದು ನಿರಾಶೆ ಯನ್ನುಂಟು ಮಾಡುತ್ತದೆ. ಅಂಬೇಡ್ಕರ್ ಪ್ರಕಟಿಸುವ ಈ ನಿಲುವಿಗೆ ಬಲವಾದ ಕಾರಣವೂ ಇದೆ. ಈ ಸಂಬಂಧ ಅವರು ಮೂರು ಬೇಡಿಕೆಗಳನ್ನು ಮಂಡಿಸುತ್ತಾರೆ.
ಒಂದನೆಯದಾಗಿ, ಅಂಬೇಡ್ಕರ್‌ರಿಗೆ ದೇವಾಲಯ ಪ್ರವೇಶ ವಿಚಾರ ಅಷ್ಟೊಂದು ಪ್ರಮುಖವಾದುದಾಗಿರಲಿಲ್ಲ. ಬದಲಾಗಿ, ಅಸ್ಪಶರು ಶಿಕ್ಷಣ ಸಂಸ್ಥೆ ಮತ್ತು ಸಾರ್ವಜನಿಕ ಸ್ಥಳಗಳನ್ನು ಪ್ರವೇಶ ಮಾಡುವುದು ಪ್ರಮುಖವಾದು ದಾಗುತ್ತದೆ. ಒಟ್ಟಾರೆಯಾಗಿ ಅಂಬೇಡ್ಕರ್‌ರ ಬೇಡಿಕೆಗಳು ಇಂತಿವೆ-ಸಾರ್ವಜನಿಕ ಸ್ಥಳಗಳಿಗೆ ಪ್ರವೇಶ, ಮುಖ್ಯವಾಗಿ ಗ್ರಾಮಗಳಲ್ಲಿ, ಅಸ್ಪಶರಿಗೆ ನಾಗರಿಕ ಹಕ್ಕುಗಳು ದೊರೆಯಬೇಕು ಎಂದು ಪ್ರತಿಪಾದಿಸುತ್ತಾರೆ.- ಗ್ರಾಮಗಳಲ್ಲಿರುವ ಬಾವಿ ಮತ್ತು ಕೆರೆಯ ನೀರನ್ನು ತೆಗೆಯುವ ಸ್ವಾತಂತ್ರ, ಗ್ರಾಮಗಳಲ್ಲಿರುವ ಶಾಲೆಗಳಿಗೆ ಪ್ರವೇಶ, ಸಾರ್ವಜನಿಕ ಸವಲತ್ತುಗಳು ದೊರೆಯುವಂತಾಗಬೇಕು.
ಇವೆಲ್ಲ ಈಡೇರಿದರೆ, ಹಿಂದೂ ಸಮಾಜದೊಳ ಗೊಂದು ಕ್ರಾಂತಿಯಾಗುತ್ತದೆ. ಅದರಿಂದ ಅಸ್ಪಶರಿಗೆ ಸಾರ್ವಜನಿಕವಾಗಿ ಸಾಮಾಜಿಕ ಸಮಾನತೆ ದೊರೆತಂತಾ ಗುತ್ತದೆ ಎಂದು ಅಂಬೇಡ್ಕರ್ ಅಭಿಪ್ರಾಯಪಡುತ್ತಾರೆ. ಆದರೆ, ಅಂಬೇಡ್ಕರ್‌ಗೆ ಇವೆಲ್ಲವನ್ನು ದಕ್ಕಿಸಿಕೊಳ್ಳುವುದು ಸುಲಭದ ಕೆಲಸವಲ್ಲವೆಂದು ಗೊತ್ತಿತ್ತು. ಇದರಿಂದ ಹಿಂಸೆಗಳು ಉದ್ಭವ ಆಗಬಹುದು ಎಂಬ ಆತಂಕ ಅವರಲಿತ್ತು. ಏಕೆಂದರೆ, ಪೋಲೀಸ್ ಮತ್ತು ನ್ಯಾಯಾಂಗ ದಲಿತರಿಗೆ ವಿರುದ್ಧವಾಗಿರುವುದರಿಂದ, ಅಸ್ಪಶ ಗುಂಪುಗಳು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎಂಬ ವಿಚಾರವು ಅವರಿಗೆ ತಿಳಿದಿತ್ತು.
ಎರಡನೆಯದಾಗಿ, ಅಂಬೇಡ್ಕರ್‌ರವರು ಅಸ್ಪಶರಿಗೆ ಸಮಾನ ಅವಕಾಶಗಳು ಸಿಗಬೇಕೆಂದು ಭಾವಿಸುತ್ತಾರೆ. ಗ್ರಾಮಮಟ್ಟದಲ್ಲಿ ಸಮಾನ ಅವಕಾಶಗಳು ಈ ಸಮುದಾಯಕ್ಕೆ ಇಲ್ಲದಿರುವುದರಿಂದ ಇವರಲ್ಲಿ ಬಡತನ ಮತ್ತು ಮೇಲ್ಜಾತಿಗಳು ಎಸಗುವ ದೌರ್ಜನ್ಯಗಳು ನಿರಂತರವಾಗಿ ಕಾಡುತ್ತಿರುವ ಸಮಸ್ಯೆಗಳಾಗಿವೆ. ಅಂಬೇಡ್ಕರ್ ರವರು ಗ್ರಾಮಗಳಲ್ಲಿ ಮತ್ತು ಪಟ್ಟಣಗಳಲ್ಲಿ ತಾವು ಉತ್ಪಾದನೆ ಮಾಡುವ ತರಕಾರಿ, ಹಾಲು, ಬೆಣ್ಣೆ ಇತ್ಯಾದಿ ವಸ್ತುಗಳನ್ನು ಮಾರಾಟ ಮಾಡುವ ಅವಕಾಶವೇ ಇಲ್ಲದಿರುವುದರಿಂದ, ಆರ್ಥಿಕವಾಗಿ ಅವರ ಜೀವನ ಕ್ರಮ ಅತ್ಯಂತ ಕೆಳಮಟ್ಟಕ್ಕೆ ತಲುಪಿತ್ತು ಎಂದು ಹೇಳುತ್ತಾರೆ.
ಇದರ ಜೊತೆಗೆ ದಲಿತ ಸಮುದಾಯ ಭೂಒಡೆತನ ಹಕ್ಕಿನಿಂದ ವಂಚಿತವಾಗಿತ್ತು. ಹಳ್ಳಿಯ ಸಂಪತ್ತನ್ನು ಅನುಭವಿಸುವ ಸ್ವಾತಂತ್ರ್ಯ ಇಲ್ಲದಿರುವುದು ಈ ಸಮುದಾಯವನ್ನು ಬಡತನದ ಕೂಪಕ್ಕೆ ತಳ್ಳಿಬಿಟ್ಟಿದೆ ಮತ್ತು ಅವರು ತಮ್ಮ ಬದುಕನ್ನು ಹಸನು ಗೊಳಿಸುವ ಅವಕಾಶದಿಂದ ವಂಚಿತರಾಗಿದ್ದಾರೆ ಎಂದು ಭಾವಿಸುತ್ತಾರೆ.
ಮೂರನೆಯದಾಗಿ, ಅಸ್ಪಶರು ಮತ್ತು ಜಾತಿ ಹಿಂದುಗಳು ಪರಸ್ಪರ ಮಿಲನಗೊಳ್ಳುವ ಒಕ್ಕೂಟ ಸಾಮಾಜಿಕ ಸಂಬಂಧದ ಮೂಲಕ ನಡೆದರೆ, ಇಡೀ ಸಮಾಜದ ದಿಕ್ಕು ಬದಲಾವಣೆ ಯಾಗಲು ಸಾಧ್ಯವೆಂದು ಅಂಬೇಡ್ಕರ್ ಗ್ರಹಿಸುತ್ತಾರೆ. Only a common cycle of participation can help people to overcome the strangeness of feeling which one has, when brought into contact with the others. Nothing can do this more effectively in my opinion than the admission, of the Depressed Classes to the houses of the caste Hindus.
ಮೇಲಿನ ಮೂರು ಬೇಡಿಕೆಗಳು ಸಮರ್ಪಕವಾಗಿ ಅನುಷ್ಠಾನ ಆಗಬೇಕಾದರೆ ಯಾವುದನ್ನು ನಿರೀಕ್ಷೆ ಮಾಡದ, ಸಮಾಜದ ಅಭಿವೃದ್ಧಿಯನ್ನೇ ಮುಖ್ಯ ಗುರಿಯಾಗಿ ಇಟ್ಟುಕೊಂಡ ಏಜೆನ್ಸಿ ಮತ್ತು ನಿಸ್ವಾರ್ಥ ಸೇವೆ ಮಾಡುವ ಮನಸ್ಸುಗಳು ನಿರಂತರವಾಗಿ ಕೆಲಸ ಮಾಡಬೇಕಾದ ಅಗತ್ಯವಿದೆ ಎಂದು ಅಂಬೇಡ್ಕರ್ ಹೇಳುತ್ತಾರೆ.
ಈ ಬಗೆಯ ಕಳಕಳಿಯನ್ನು ಅವರು ಪದೇ ಪದೇ ಹೇಳಿ ಕಾಂಗ್ರೆಸ್ ಮತ್ತು ಗಾಂಧೀಜಿ ಮೇಲೆ ಒತ್ತಡ ತಂದರೂ, ಗಾಂಧೀಜಿ ಮಾತ್ರ ಅಂಬೇಡ್ಕರ್ ಸಲಹೆಗಳನ್ನು ಗಣನೆಗೆ ತೆಗೆದುಕೊಳ್ಳುವುದಿಲ್ಲ. ಬದಲಾಗಿ ತಾನು ಪ್ರತಿಪಾದಿಸುವ ಟೆಂಪಲ್ ಎಂಟ್ರಿ ಮತ್ತು ಹರಿಜನ ಸೇವಕ ಸಂಘ ರೂಪಿಸುವ ಕಾರ್ಯ ಚಟುವಟಿಕೆ ಗಳನ್ನು ಕಾರ್ಯರೂಪಕ್ಕೆ ತರಲು ಹೆಚ್ಚು ಒತ್ತು ನೀಡುತ್ತಾರೆ.
ಇಲ್ಲಿ ಒಂದು ಅಂಶವನ್ನು ಗಮನಿಸಬೇಕು. ಗಾಂಧೀಜಿ ಸಂಘಟಿಸಿದ ವಸಾಹತು ವಿರೋಧಿ ಚಳವಳಿಯಲ್ಲಿ ಜಾತ್ಯತೀತತೆ, ಅಹಿಂಸೆ ಮತ್ತು ಖಾದಿ ಕುರಿತು ಸಾರ್ವತ್ರಿಕವಾಗಿ ಜನರನ್ನು ಎಚ್ಚರಿಸಲು ಯಶಸ್ವಿಯಾದರು. ಆದರೆ, ಅದೇ ರೀತಿ, ಅಸ್ಪಶರು ಮತ್ತು ದುರ್ಬಲ ವರ್ಗದವರ ಮೇಲೆ ಜಾತಿ ಹಿಂದುಗಳು ನಿರಂತರವಾಗಿ ಎಸಗುತ್ತಿರುವ ದೌರ್ಜನ್ಯ ತಡಗಟ್ಟುವಲ್ಲಿ ಯಾವುದೇ ಶ್ರಮ ವಹಿಸಲಿಲ್ಲ. ಇದೇ ಅಲ್ಲವೆ ವಿಪರ್ಯಾಸ?
ಅಸ್ಪೃಶರನ್ನು ಉದ್ದೇಶಿಸಿ ರೂಪಿಸಿದ ಗಾಂಧೀ ಹೋರಾಟಕ್ಕೆ ಇದು ದೊಡ್ಡ ಹಿನ್ನಡೆಯಂತೆಲೇ ಹೇಳಬಹುದು. ಈ ಹಿನ್ನಡೆಯ ಪರಿಣಾಮಗಳು ಸ್ವತಂತ್ರ ಭಾರತದಲ್ಲೂ ಪ್ರತಿದ್ವನಿಸುತ್ತಲೇ ಇದ್ದಿರುವುದು ದಲಿತ, ದುರ್ಬಲ ವರ್ಗಗಳ ದುರದೃಷ್ಟ. ಈ ಕಾರಣಕ್ಕಾಗಿ ಆಧುನಿಕ ಭಾರತದ ಸರಕಾರವು ಒಂದು ಏಜನ್ಸಿಯಾಗಿ ದಲಿತರ ಸಮಸ್ಯೆಗಳ ಪರಿಹಾರಕ್ಕಾಗಿ ಶ್ರಮಿಸಬೇಕಾದ ಅನಿವಾರ್ಯತೆಯನ್ನು ಎದುರಿಸಬೇಕಾಯಿತು.
ಸಂವಿಧಾನವು ಕೂಡ ಸ್ಟೇಟ್‌ಗೆ ವಿಶೇಷವಾದ ಜವಾಬ್ದಾರಿಯ ಅವಕಾಶವನ್ನು ಕಲ್ಪಿಸಿ, ದಲಿತರ ಅಭಿವೃದ್ಧಿ, ರಕ್ಷಣೆ ಮತ್ತು ಅವರ ಬದುಕಲ್ಲಿ ಪರಿವರ್ತನೆ ತರುವ ವಿಶೇಷ ಯೋಜನೆ ರೂಪಿಸುವ ಮಹತ್ಕಾರ್ಯವನ್ನು ಸೂಚಿಸಿತು. ಅಸ್ಪಶತೆಯ ನಿರ್ಮೂಲನ, ಜೀತಪದ್ಧತಿಯಂತಹ ಕೆಟ್ಟ ಸಂಪ್ರದಾಯವನ್ನು ತೊಡೆದು ಹಾಕಿ ದಲಿತರ ರಕ್ಷಣೆ ಮಾಡುವುದು ಒಂದನೆಯ ಜವಾಬ್ದಾರಿ. ಶೈಕ್ಷಣಿಕ ಯೋಜನೆಗಳಲ್ಲಿ ಮುಖ್ಯವಾಗಿ ಸ್ಕಾಲರ್‌ಶಿಪ್, ವಸತಿ ನಿಲಯಗಳ ಸವಲತ್ತುಗಳು, ದಲಿತ ಸಮುದಾಯದ ಅಭಿವೃದ್ಧಿಗೆ ಸಂಬಂಧಿಸಿದ ಯೋಜನೆಗಳನ್ನು ಅನುಷ್ಠಾನಕ್ಕೆ ತರುವುದು ಎರಡನೆಯ ಜವಾಬ್ದಾರಿ. ಮತ್ತು ಶಾಸಕಾಂಗ, ಶೈಕ್ಷಣಿಕ ಮತ್ತು ಉದ್ಯೋಗ ರಂಗದಲ್ಲಿ ಮೀಸಲಾತಿ ಮೂರನೆಯ ಜವಾಬ್ದಾರಿ.
ಈ ಬಗೆಯ ಸಂವಿಧಾನಾತ್ಮಕ ಸುಧಾರಣೆಗಳು ದಲಿತರ ಏಳಿಗೆಗೆ ಅತೀ ಜರೂರಾಗಿ ಅನುಷ್ಠಾನ ಮಾಡಬೇಕಾದುದು ಸರಕಾರದ ಕರ್ತವ್ಯ ವಾಗಿದ್ದು, ಇದನ್ನು ಈಡೇರಿಸಲು ಎದುರಾಗುವ ಎಡರುತೊಡರುಗಳು ಈ ಸಮುದಾಯದ ಮತ್ತು ಒಟ್ಟಾರೆ ನಾಗರಿಕ ಸಮಾಜದ ಬೆಳವಣಿಗೆಗೆ ಶೋಭೆ ತರುವಂತಹದ್ದಾಗದು. ಆದರೆ, ಕಳೆದ ಆರು ದಶಕಗಳಲ್ಲಿ ಈ ಸಮುದಾಯದ ಬೆಳವಣಿಗೆಗೆ ಮತ್ತು ಅವರ ಆಸ್ತಿ ರಕ್ಷಣೆ ವಿಚಾರವಾಗಿ ಸರಕಾರ ಹಮ್ಮಿಕೊಂಡ ಕಾರ್ಯಕ್ರಮಗಳು ಮತ್ತು ಅದರ ಫಲಿತಾಂಶಗಳು ನಿರಾಶೆಯನ್ನುಂಟು ಮಾಡುತ್ತದೆ. ಈ ಜನತೆಯ ಜೀವನ ಕ್ರಮದಲ್ಲಿ ಆದ ಬದಲಾವಣೆಯನ್ನು ಗಮನಿಸಿದರೆ ಭಾರತದ ನಾಗರಿಕ ಸಮಾಜ ಶ್ರೇಷ್ಠವಾದುದೆಂದು ಒಪ್ಪಿಕೊಳ್ಳಲು ಸಾಧ್ಯವಿಲ್ಲ.
Source: Varthabharathi Kannada daily 

ದಲಿತರು ಮತ್ತು ಶೋಷಿತರಿಗೆ ನಿಜವಾದ ಸ್ವಾತಂತ್ರ, ಸಮಾನತೆ ಸಿಗುವುದು ಎಂದು..?


ಸೋಮವಾರ - ಏಪ್ರಿಲ್ -11-2011

1932ರಲ್ಲಿ ಮುಂಬೈಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್‌ರವರು ದಲಿತರ ಕುರಿತು ಮಾಡಿದ ಭಾಷಣ ಇಡೀ ಭಾರತದ ದಲಿತ ಸಮುದಾಯ ಎಂದೂ ಮರೆಯಲಾಗದ ಮಾತುಗಳು. ‘ದಲಿತ ಶೋಷಿತ ಸಮುದಾಯಗಳಿಗೆ ಎಂದು ಬೇರೆ ಜಾತಿಯವರಿಂದ ಬಿಡುಗಡೆ ಸಿಗುತ್ತದೆಯೋ ಆ ದಿನ ಅವರ ಪಾಲಿಗೆ ಸ್ವಾತಂತ್ರದ ದಿನ ಬಂದ ಹಾಗೆ’ ಎಂದು ಹೇಳಿದ್ದಾರೆ.21ನೆ ಶತಮಾನದಲ್ಲೂ ಸಹಾ ಮಾನಭಂಗ ಹತ್ಯೆ ದೌರ್ಜನ್ಯಕ್ಕೆ ಒಳಗಾಗುತ್ತಲೇ ಇರುವುದು ತುಂಬಾ ನೋವಿನ ಸಂಗತಿ. ಮೂಲಭೂತ ವಾದಿಗಳು ಇವರನ್ನು ಯಾವುದೇ ರಂಗದಲ್ಲಿಯೂ ಸಹ ಮುಂದೆ ಬಿಡದೆ ಅವರನ್ನು ಹಿಂದೆ ತಳ್ಳುತ್ತಿರುವುದು ಮತ್ತೊಂದು ನೋವಿನ ಸಂಗತಿ.
ಇದಕ್ಕೆ ಪೂರಕವೆಂಬಂತೆ ಮಹಾರಾಷ್ಟ್ರದ ಬಿಲ್ಹಾ ಎಂಬ ಚಿಕ್ಕ ಗ್ರಾಮದಲ್ಲಿ ನಡೆದ ಬಹಿಷ್ಕಾರ ಆಗಿರಬಹುದು ಹಾಗೂ ಬಿಹಾರದ ರಾಹರ್ ಎಂಬಲ್ಲಿ ನಡೆದ ದೌರ್ಜನ್ಯವಾಗಿರಬಹುದು, ಕರ್ನಾಟಕದಲ್ಲಿ ಭಂಗಿ ಸಮುದಾಯದವರ ಮೇಲೆ ನಡೆದಂತಹ ಅನ್ಯಾಯವಾಗಿರಬಹುದು. ಹೀಗೆ ನೋಡುತ್ತಾ ಹೋದರೆ ಇಡೀ ಭಾರತದಲ್ಲಿರುವ ದಲಿತರಿಗೆ ಬೇರೆ ಜಾತಿಯವರಿಂದ ಒಂದಲ್ಲಾ ಒಂದು ರೀತಿಯ ಶೋಷಣೆ, ದೌರ್ಜನ್ಯಗಳು ನಡೆಯುತ್ತಲೇ ಇವೆ.
ಕರ್ನಾಟದಲ್ಲೂ ಬಿಜೆಪಿ ಸರಕಾರವು ಆಡಳಿತಕ್ಕೆ ಬಂದ ನಂತರವಂತೂ ದಲಿತರು ಯಾವುದೇ ರಂಗಕ್ಕೂ ಪ್ರವೇಶವನ್ನು ಪಡೆಯಲು ಬಿಡುತ್ತಿಲ್ಲ. ದಲಿತರ ಸಂಕಷ್ಟಗಳು ಕೇವಲ ಕನಸಿನ ಮಾತುಗಳಾಗೇ ಉಳಿದಿವೆ. ಇದರ ಮತ್ತೊಂದು ಮುಖವೆಂದರೆ ಇತ್ತೀಚೆಗೆ ಬೆಳಗಾವಿಯಲ್ಲಿ ನಡೆದ ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ದಲಿತರಿಗೆ ಮುಖ್ಯ ವೇದಿಕೆಯಿಂದ ಸುಮಾರು 5-6 ಕಿ.ಮೀ. ದೂರದಲ್ಲಿ ಪ್ರತ್ಯೇಕ ವೇದಿಕೆಯನ್ನು ಸಿದ್ಧಗೊಳಿಸಿ ಇವರಿಗೆ ಮತ್ತೆ ಅವಮಾನ ಮಾಡುವುದರ ಮೂಲಕ ನೀವು ದೂರವಿರುವುದೇ ಉತ್ತಮವೆಂಬ ಹಾದಿಯನ್ನು ತೋರಿಸಿರುವುದು ವಿಷಾದಕರ ಸಂಗತಿ.
ವಿಕಿಲೀಕ್ಸ್ ಮಾಡಿರುವ ವರದಿಯೇ ಇದಕ್ಕೆ ನೈಜ ಸಾಕ್ಷಿ. ಇವರು ವರದಿ ಮಾಡಿರುವ ಹಾಗೆ ನೋಡಿದರೆ ಯುಪಿಎ ಸರಕಾರದಲ್ಲಿ ದಲಿತರ ಬಗ್ಗೆ ಕಾಳಜಿ ಇರುವಂತಹವರು ಯಾರೊಬ್ಬರು ಇಲ್ಲವೆನ್ನುವುದು ನೂರಕ್ಕೆ ನೂರು ಸತ್ಯದ ಸಂಗತಿ. ಈ ರೀತಿ ದೇಶದಲ್ಲಿ ಶೋಷಣೆ, ದೌರ್ಜನ್ಯಗಳು ಮುಂದುವರಿಯುತ್ತಾ ಹೋದರೆ, ಇವರನ್ನು ನಾಯಿಗಳಿಗಿಂತ ಕೀಳಾಗಿ ನಡೆಸಿಕೊಳ್ಳುವುದರಲ್ಲಿ ಎರಡು ಮಾತಿಲ್ಲ. ಹಾಗಾದರೆ ದೇಶದಲ್ಲಿ ಇವರ ಅಭಿವೃದ್ಧಿ ಹೇಗೆ ಎಂಬುದನ್ನು ಪ್ರತಿಯೊಬ್ಬ ಶೋಷಿತನೂ ಚಿಂತಿಸಬೇಕಾಗಿರುವುದಂತೂ ಸತ್ಯ.

- ಗಂಗರಾಜು

ಕನ್ನಮೇಡಿ ಪಾವಗಡ

Varthabharathi

html